7:30 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಯಾದಗಿರಿ: ಮಹಿಳೆಯ ಬೆತ್ತಲೆಗೊಳಿಸಿ ತಂಡದಿಂದ ಹಲ್ಲೆ; ಮೈಮೇಲೆ ಕೈಹಾಕಿ ವಿಕೃತಿ ಮೆರೆದ ದುಷ್ಕರ್ಮಿಗಳು 

13/09/2021, 11:27

ಯಾದಗಿರಿ(Reporterkarnataka.com): ಯಾದಗಿರಿ ಜಿಲ್ಲೆಯ ಯಾದಗಿರಿ ಶಹಾಪುರ ಮಾರ್ಗದ ಹೆದ್ದಾರಿಯ ಸಮೀಪ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿ, ಮಾನಭಂಗ ಮಾಡಿದ ಭಯಾನಕ ಘಟನೆ ನಡೆದಿದೆ.

ಕಬ್ಬಿನ ಜಲ್ಲೆಯಿಂದ ಥಳಿಸಿದ 4-5 ಮಂದಿಯ ತಂಡ ಮಹಿಳೆಯ ಅಂಗಾಂಗಳ ಮೇಲೆ ಕೈಯಾಡಿಸಿ ವಿಕೃತ ಮೆರೆದ ಬಗ್ಗೆ ವರದಿಯಾಗಿದೆ. ರಾತ್ರಿ ವೇಳೆ ದುಷ್ಕರ್ಮಿಗಳ ತಂಡ ಟಾರ್ಚ್ ಲೈಟ್ ಬೆಳಕಿನಲ್ಲಿ ಮಹಿಳೆಯನ್ನು ಥಳಿಸುತ್ತಿರುವ ವಿಡಿಯೋ ಇದೀಗ ವೈರಲ್ ಆಗಿದೆ.

ಹಲ್ಲೆ ನಡೆಸಿದವರು ಹಾಗೂ ಹಲ್ಲೆಗೊಳಗಾದ ಮಹಿಳೆಯ ವಿವರ ಇನ್ನಷ್ಟೇ ತಿಳಿಯಬೇಕಾಗಿದೆ. ಘಟನೆ ಸಂಬಂಧ ಯಾವುದೇ ದೂರು ಕೂಡ ದಾಖಲಾಗಿಲ್ಲ. 

ಮೇಲ್ನೋಟಕ್ಕೆ ಇದೊಂದು ಹನಿಟ್ರ್ಯಾಪ್ ಸಂಬಂಧವಾಗಿ ನಡೆದ ಹಲ್ಲೆ ಎಂದು ಹೇಳಲಾಗುತ್ತಿದೆ. ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಮಹಿಳೆಗೆ ಇದು ನಿನ್ನ ವಿಡಿಯೋ ತಾನೇ? ಎಂದು ಪ್ರಶ್ನಿಸುತ್ತಿರುವುದು ಕಂಡು ಬಂದಿದೆ. ಜೊತೆಗೆ ವ್ಯಕ್ತಿಯೊಬ್ಬ ನನ್ನಿಂದ 10 ಸಾವಿರ ರೂಪಾಯಿ ಅವಳು ಪಡೆದುಕೊಂಡಿದ್ದಾಳೆ ಎಂದು ಆರೋಪಿಸಿ ಥಳಿಸುತ್ತಿರುವುದು ಕೂಡ ಕಂಡು ಬಂದಿದೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು