8:30 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ…

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

31/03/2026, 20:15

ಬಾಗಲಕೋಟೆ(reporterkarnataka.com): ಸಿದ್ದರಾಮಯ್ಯ ಬಾದಾಮಿ ಶಾಸಕರಾಗಿದ್ದಾಗ ಅಭಿವೃದ್ಧಿ ಮಾಡಿಲ್ಲ. ಆಗ ಕಳ್ಳ ಮತಗಳಿಂದ ನನ್ನ ವಿರುದ್ಧ ಗೆದ್ದಿದ್ದರು ಎಂದು ಶ್ರೀರಾಮುಲು ಆರೋಪಿಸಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ಐದು ದಿನ ಬಿಡಿ, ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರು ಇಲ್ಲಿಯೇ ಇದ್ದರು. ಎಂಎಲ್ಎ ಆಗಿ ನಮ್ಮ ಭಾಗದಲ್ಲಿ ಗೆದ್ದಿದ್ದರು. ನನ್ನ ವಿರುದ್ಧವೇ 1600 ವೋಟ್ ಗಳಿಂದ ಗೆದ್ದಿದ್ದರು. ಆ 1600 ವೋಟ್ ಗಳು ಕಳ್ಳ ವೋಟ್ ಗಳಾಗಿದ್ದವು.
ಯಾಕಂದ್ರೆ ಸಿ.ಎಂ.ಇಬ್ರಾಹಿಂ, ಪಾಟೀಲ್ ಸಾಹೇಬ್ರುಗಳು ಉಸ್ತುವಾರಿಯಾಗಿದ್ದರು. ಅವರು ಏನು ಹೇಳಿದ್ದರು ನೆನಪಿಸಿಕೊಳ್ಳಿ. ಹತ್ತಿರತ್ತಿರ 2 ಸಾವಿರ ವೋಟ್ ಗಳನ್ನು ಖರೀದಿ ಮಾಡಿ, ಗೆದ್ದಿದ್ದೀವಿ ಅಂದಿದ್ದರು. ಬಹುಶಃ ಅಂದು ಸಿದ್ದರಾಮಯ್ಯ ಸಾಹೇಬರ ಗೆಲುವು ಅಂತಾನೇ ಅರ್ಥ ಎಂದಿದ್ದಾರೆ. ಈ ಸಲ ನಾವೂ ಬಿಜೆಪಿಯಲ್ಲಿ ಚರಂತಿಮಠ ಅವರನ್ನು ಗೆಲ್ಲಿಸಬೇಕು ಎಂಬ ವಿಚಾರದಲ್ಲಿ ಎಲ್ಲರೂ ಎಫರ್ಟ್ ಹಾಕ್ತಾ ಇದ್ದೇವೆ. ಚರಂತಿಮಠ್ ಅವರು ಕೂಡ ಬಹಳಷ್ಟು ಒಳ್ಳೊಳ್ಳೆ ಕೆಲಸಗಳನ್ನ ಮಾಡಿದ್ದಾರೆ. 2023ರಲ್ಲಿ ಸೋತಿರಬಹುದು. ಜನರಲ್ಲಿ ಭಾವನೆ ಮೂಡಬಹುದು. ಎರಡೂವರೆ ವರ್ಷಗಳಾಯ್ತಪ್ಪ. ಆದರೂ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಕೇವಲ ಬೇರೆ ಬೇರೆ ಕಾರಣಗಳಿಂದ ಅವರು ಏನು ಮಾಡೋದಕ್ಕೆ ಆಗಿಲ್ಲ. ಈ ಸಲ ಭಾರತೀಯ ಜನತಾ ಪಾರ್ಟಿಯನ್ನು ಕೈ ಹಿಡಿಬೇಕು ಅಂತ ಜನ ತೀರ್ಮಾನ ಮಾಡಿದ್ದಾರೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು