6:48 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ವಿಧಾನ ಮಂಡಲ ಅಧಿವೇಶನ ಆರಂಭ: ಎತ್ತಿನ ಗಾಡಿಯಲ್ಲಿ ಎಂಟ್ರಿ ಕೊಟ್ಟ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್

13/09/2021, 20:06

ಬೆಂಗಳೂರು(reporterkarnataka.com): 10 ದಿನಗಳ ಕಾಲ ನಡೆಯಲಿರುವ ವಿಧಾನ ಮಂಡಲ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದು ಮೊದಲ ಅಧಿವೇಶನವಾಗಿದೆ. ಈ ನಡುವೆ ತೈಲ ಬೆಲೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯೇರಿಕೆಯನ್ನು ಪ್ರತಿಭಟಿಸಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎತ್ತಿನ ಗಾಡಿಯಲ್ಲಿ ವಿಧಾನಸೌಧಕ್ಕೆ ಆಗಮಿಸಿ ಗಮನ ಸೆಳೆದರು.

ಸಿದ್ದರಾಮಯ್ಯ ಅವರು ತಮ್ಮ ಅಧಿಕೃತ ನಿವಾಸದಿಂದ ವಿಧಾನಸೌಧದತ್ತ ತೆರಳಿದರು. ಎಸ್​.ಆರ್.ಪಾಟೀಲ್, ಎಂ‌.ಬಿ.ಪಾಟೀಲ್ ಮತ್ತು ಪರಿಷತ್ ಸದಸ್ಯ ನಜಿರ್ ಅಹಮದ್ ಸಿದರಾಮಯ್ಯರಿಗೆ ಸಾಥ್ ನೀಡಿದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಹೆಚ್ಚಾಗಿಲ್ಲ. ಕೇಂದ್ರ ಸರಕಾರ ಬರೀ ಸುಳ್ಳು ಹೇಳುತ್ತಿದೆ. 7 ವರ್ಷದಲ್ಲಿ 24 ಲಕ್ಷ ಕೋಟಿ ರೂ. ಆದಾಯ ಬಂದಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಇಂಧನ ಬೆಲೆಯೇರಿಕೆಯೂ ಆಗಿದೆ.

ಕೇಂದ್ರ ಸರ್ಕಾರ ಜನರಿಗೆ ಮೋಸ ಮಾಡುತ್ತಿದೆ. ಹಿಂದಿನ ಸರ್ಕಾರ ಹೆಚ್ಚು ಸಾಲ ಮಾಡಿದೆ ಎಂದು ಹೇಳುತ್ತಾರೆ. ಕಚ್ಚಾ ತೈಲ ಬೆಲೆ ಹೆಚ್ಚಾಗಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ಬೆಲೆಯೇರಿಕೆ ವಿರುದ್ಧ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ನಾವು ಜನರ ಧ್ವನಿಯಾಗಿ ಕೆಲಸ ಮಾಡುತ್ತಿದ್ದೇವೆ. ಪೆಟ್ರೋಲ್, ಡೀಸೆಲ್, ಅಡುಗೆ ಎಣ್ಣೆ, ಅಗತ್ಯವಸ್ತುಗಳ ಬೆಲೆ ಏರಿಕೆಯಾಗಿದೆ. ಹೀಗಾಗಿ ಸರ್ಕಾರಕ್ಕೆ ಬಿಸಿಮುಟ್ಟಿಸಲು ಎತ್ತಿನಗಾಡಿಯಲ್ಲಿ ಹೋರಾಟ ನಡೆಸುತ್ತಿದ್ದೇವೆ. ರಾಜ್ಯ ಸರ್ಕಾರ ಜನರಿಂದ ಪ್ರತಿದಿನ ಪಿಕ್ ಪಾಕೆಟ್ ಮಾಡುತ್ತಿದೆ. ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು