3:37 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಬೆಂಗಳೂರನ್ನೇ ಬೆಚ್ಚಿಬೀಳಿಸಿದ ಕೃತ್ಯ: ಕೆಲಸದಿಂದ ತೆಗೆದ ಸಿಟ್ಟಿಗೆ ಮ್ಯಾನೇಜರ್ ಗೆ ಚಾಕುವಿನಿಂದ ಇರಿದು ಬರ್ಬರ ಹತ್ಯೆ

01/04/2026, 15:27

ಬೆಂಗಳೂರು(reporterkarnataka.com):ಕೆಲಸದಿಂದ ತೆಗೆದಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಯೋರ್ವ, ಕಂಪನಿಯ ಮ್ಯಾನೇಜರ್​​​ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಭಯಾನಕ ಘಟನೆ ಬೆಂಗಳೂರಿನ ತಿಗಳರಪಾಳ್ಯದಲ್ಲಿ ನಡೆದಿದೆ.ತಿಗಳರಪಾಳ್ಯದ ಪವರ್ ಪ್ಲಾಸ್ಟಿಕ್ ಪ್ರೈವೆಟ್ ಲಿಮಿಟೆಡ್ ಕಂಪನಿಯ ಮ್ಯಾನೇಜರ್ ರಾಹುಲ್(38) ಹತ್ಯೆಯಾದ ವ್ಯಕ್ತಿ. ಕೆಲಸದಿಂದ ತೆಗೆದಿದ್ದಕ್ಕೆ ಆಕ್ರೋಶಗೊಂಡ ಉದ್ಯೋಗಿ ಯಾದಗಿರಿ ಮೂಲದ ಹನುಮಂತಪ್ಪ, ಮ್ಯಾನೇಜರ್ ರಾಹುಲ್ ಗೆ ಚಾಕುವಿನಿಂದ ಇರಿದಿದ್ದ. ಇದರಿಂದ ಗಾಯಗೊಂಡ ರಾಹುಲ್​ ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಮ್ಯಾನೇಜರ್ ರಾಹುಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಯಾದಗಿರಿ ಮೂಲದ ಹನುಮಂತಪ್ಪ ಎನ್ನುವಾತ ಬೆಂಗಳೂರಿನ ತಿಗಳರಪಾಳ್ಯದಲ್ಲಿರುವ ಪವರ್ ಪ್ಲಾಸ್ಟಿಕ್ ಪ್ರೈವೆಟ್ ಲಿಮಿಟೆಡ್ ಎನ್ನುವ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಆದ್ರೆ, ಏಕಾಏಕಿ ಹನುಮಂತಪ್ಪನನ್ನು ಕೆಲಸದಿಂದ ತೆಗೆದು ಹಾಕಲಾಗಿದೆ. ಇದರಿಂದ ಕೋಪಗೊಂಡ ಹನುಮಂತಪ್ಪ, ನಿನ್ನೆ(ಮಾರ್ಚ್ 30) ಕಂಪನಿಯಲ್ಲಿದ್ದ ಮ್ಯಾನೇಜರ್ ರಾಹುಲ್​​ಗೆ ಸುಮಾರು 10 ಬಾರಿ ಚಾಕುವಿನಿಂದ ಇರಿದಿದ್ದ. ಪರಿಣಾಮ ತೀವ್ರ ರಕ್ತಸ್ರಾವದಿಂದ ರಾಹುಲ್, ಆಸ್ಪತ್ರೆಗೆ ದಾಖಲಾಗಿದ್ದ. ಆದರೆ, ದುರದೃಷ್ಟವಶಾತ್, ಚಿಕಿತ್ಸೆ ಫಲಿಸದೇ ಮ್ಯಾನೇಜರ್ ರಾಹುಲ್ ಮಂಗಳವಾರ ಮೃತಪಟ್ಟಿದ್ದಾರೆ. ಮೃತ ರಾಹುಲ್ ಉತ್ತರ ಪ್ರದೇಶ ಮೂಲದವರು ಎಂದು ತಿಳಿದುಬಂದಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮುಗಿಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಸದ್ಯ ರಾಜಗೋಪಾಲ್ ನಗರ ಪೊಲೀಸರು, ಯಾದಗಿರಿ ಮೂಲಕದ ಆರೋಪಿ ಹನುಮಂತಪ್ಪನನ್ನ ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು