1:38 AM Friday18 - September 2026
ಬ್ರೇಕಿಂಗ್ ನ್ಯೂಸ್
ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:…

ಇತ್ತೀಚಿನ ಸುದ್ದಿ

ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ ಏನು?

04/04/2026, 22:08

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಹಂದಿ ಶಿಕಾರಿ ಮಾಡಲು ಇಟ್ಟಿದ್ದ ಸಿಡಿಯುವ ವಸ್ತುವೊಂದು ಸಿಡಿದು ಮಹಿಳೆಯೊಬ್ಬರ ಕೈಯ ಐದು ಬೆರಳುಗಳು ಸಂಪೂರ್ಣ ಹಾನಿಗೊಂಡ ಘಟನೆ ನೆಂಟೂರು ಬಳಿ ನಡೆದಿದೆ.
ಆಗುಂಬೆ ಸಮೀಪದ ಹೊನ್ನೇತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಂಟೂರಿನ ಕಮಲಮ್ಮ (72) ಗಾಯಗೊಂಡ ಮಹಿಳೆ. ತೋಟದಲ್ಲಿ ಹಂದಿ ಶಿಕಾರಿ ಮಾಡಲು ಗೋಟು ಅಡಿಕೆ ಒಳಗೆ ಕಚ್ಚಾ ಬಾಂಬ್ ಇಡಲಾಗಿತ್ತು. ಅದನ್ನು ನಾಯಿ ಕಚ್ಚಿಕೊಂಡು ಮನೆಯ ಅಂಗಳಕ್ಕೆ ತಂದಿದೆ. ಅದನ್ನು ಮುಟ್ಟಿದ ಕಮಲಮ್ಮ ಅವರಿಗೆ ಅಡಿಕೆ ಸಿಡಿದಿದ್ದು ಕೈ ಸಂಪೂರ್ಣ ಸುಟ್ಟು ಗಾಯವಾಗಿದೆ.
ಊರಿನ ಗ್ರಾಮಸ್ಥರು ಬಾಂಬ್ ಸಿಡಿದು ಎಂದು ತಿಳಿಸಿದ್ದು ಆದರೆ ಕುಟುಂಬಸ್ಥರು ಅಡಿಕೆ ಸಿಡಿದು ಗಾಯವಾಗಿದೆ ಎನ್ನುತ್ತಿದ್ದಾರೆ. ಅಡಿಕೆ ಸಿಡಿಯುತ್ತಾ? ಅಡಿಕೆಯೊಳಗೆ ಏನಿತ್ತು? ಎಂಬ ಪ್ರೆಶ್ನೆ ಉದ್ಭವಾಗಿತ್ತು. ಈಗ ಪೊಲೀಸ್ ಮಾಹಿತಿಯಂತೆ ಗೋಟು ಅಡಿಕೆ ಒಳಗೆ ಕಚ್ಚಾ ಬಾಂಬ್ ಇಟ್ಟು ಹಂದಿ ಶಿಕಾರಿ ಮಾಡಲು ಪ್ಲಾನ್ ಮಾಡಲಾಗಿತ್ತು. ಆದರೆ ಅದರಿಂದ ಇಂತಹ ಅವಘಡ ಆಗಿದೆ ಎಂಬುದಾಗಿ ತಿಳಿಸಿದ್ದಾರೆ.
ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು