7:31 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜು: ‘ಜೀವಶಾಸ್ತ್ರದಲ್ಲಿ ವೃತ್ತಿ ಅವಕಾಶಗಳು’ ಆನ್ ಲೈನ್ ಕಾರ್ಯಾಗಾರ

13/09/2021, 23:18

ಮಂಗಳೂರು(reporterkarnatakanews):ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಇಲ್ಲಿನ ಪ್ರಾಣಿಶಾಸ್ತ್ರ ವಿಭಾಗದ ವತಿಯಿಂದ ಜೀವಶಾಸ್ತ್ರದಲ್ಲಿ ವೃತ್ತಿ ಅವಕಾಶಗಳು ಎಂಬ ವಿಷಯದ ಬಗ್ಗೆ ವಿಜ್ಞಾನದ ವಿದ್ಯಾರ್ಥಿಗಳಿಗೆ ಆನ್ಲೈನ್ ಕಾರ್ಯಗಾರ ಜರುಗಿತು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ವಿಶ್ವವಿದ್ಯಾನಿಲಯದ ಜೀವಶಾಸ್ತ್ರ ವಿಭಾಗದ ಅಧ್ಯಕ್ಷ ರಾದ ಪ್ರೊಫೆಸರ್ ಮೋನಿಕಾ ಸದಾನಂದ ಮಾತನಾಡಿ ಸರಕಾರ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಅನೇಕ ಸವಲತ್ತುಗಳನ್ನು ಒದಗಿಸಿದೆ ಅದನ್ನು ಉತ್ತಮ ರೀತಿಯಲ್ಲಿ ಬಳಸಿಕೊಂಡು, ಸಮಾಜದಲ್ಲಿ ಉನ್ನತ ಮಟ್ಟದಲ್ಲಿ ಸಾದಿಸಿ ಪರೋಕ್ಷವಾಗಿ ಸರಕಾರಕ್ಕೆ ಕೊಡುಗೆ ನೀಡಬೇಕು. ಎಂದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಿನ್ಸಿಪಾಲ್ ಡಾ.ಅನುಸೂಯ ರೈ ಮಾತನಾಡಿ ವೃತ್ತಿ ಮತ್ತು ಸಂಶೋಧನಾತ್ಮಕ ವಿಚಾರಗಳು ಹೆಚ್ಚಾಗಿ ಚರ್ಚಿತ ವಿಷಯವಾಗಿದೆ ಎಂದರು.

ಕಾರ್ಯಕ್ರಮದ ಆಯೋಜಕರಾದ ಪ್ರಾಣಿಶಾಸ್ತ್ರ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಡಾ. ನಾಗರತ್ನ ಕೆಎ ಮಾತನಾಡಿ ಪರಿಶ್ರಮ ಹಾಗೂ ಸಾಧನೆ ಜೊತೆ ಗೂಡಿದರೆ ಯಶಸ್ಸು ನಮ್ಮದಾಗಲಿದೆ. ಎಂದು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು. ಹಾಗೂ ಅತಿಥಿಗಳಿಗೆ ಸ್ವಾಗತಕೋರಿದರು.ಹಾಗೂ ಉಪಸ್ಥಿತರಿರುವ ವಿಭಾಗ ಮುಖ್ಯಸ್ಥರಾದ ಡಾ.ಬಿ. ಎಸ್ ಕಡಮಣ್ಣಾಯ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮದಲ್ಲಿ ನಡೆಯುತ್ತಿದೆ ಎಂದರು.



ಉಪನ್ಯಾಸಕಿ ಗೀತಾ. ಎಂ ವಂದಿಸಿದರು. ಅತಿಥಿ ಉಪನ್ಯಾಸಕಿ ಸೃಜನ ಅತಿಥಿಗಳನ್ನು ಪರಿಚಯಿಸಿದರೆ, ವಿದ್ಯಾರ್ಥಿನಿ ಸಲೋನಿ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು