3:43 PM Friday10 - April 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:…

ಇತ್ತೀಚಿನ ಸುದ್ದಿ

Chikkamagaluru | ಚಂದ್ರದ್ರೋಣ ಪರ್ವತಕ್ಕೆ ಪ್ರವಾಸ ಹೋಗಿದ್ದ ಬಾಲಕಿ ಮಿಸ್ಸಿಂಗ್: ತೀವ್ರ ಕಾರ್ಯಾಚರಣೆ ಶುರು

08/04/2026, 14:17

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಡಿಕೇರಿ ಬೆನ್ನಲ್ಲೆ ಕಾಫಿನಾಡಲ್ಲೂ ಪ್ರವಾಸಿ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಾಳೆ.
ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಬಾಲಕಿ ನಿಗೂಢವಾಗಿ ಮಿಸ್ಸಿಂಗ್ ಆಗಿದ್ದಾಳೆ.
ಕೇರಳದ ಪಾಲಕ್ಕಾಡ್ ಮೂಲದ ನಂದನ ಎಂಬಾಕೆ ನಾಪತ್ತೆಯಾದ ಬಾಲಕಿ.
ಪ್ರವಾಸಕ್ಕೆಂದು ಕೇರಳದಿಂದ ಕಾಫಿನಾಡಿಗೆ ಆಗಮಿಸಿದ್ದ 40 ಜನರ ತಂಡದಲ್ಲಿ ಬಾಲಕಿ ಇದ್ದಳು. ಕುಟುಂಬ ಸದಸ್ಯರೊಂದಿಗೆ ನಂದನ ಆಗಮಿಸಿದ್ದಳು. ನಂದನ 10ನೇ ತರಗತಿ ಓದುತ್ತಿದ್ದಾಳೆ.
ಪರ್ವತದ ಸುಂದರ ತಾಣ ವೀಕ್ಷಿಸುವಾಗ ತಂಡದಿಂದ ಬೇರ್ಪಟ್ಟಿದ್ದಳು. ಪೊಲೀಸ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು, ಸ್ಥಳೀಯರಿಂದ ಶೋಧ ಕಾರ್ಯ ನಡೆಯುತ್ತಿದೆ. ದಟ್ಟ ಅರಣ್ಯ ಹಾಗೂ ಕಡಿದಾದ ಬೆಟ್ಟ-ಗುಡ್ಡಗಳಲ್ಲಿ ತೀವ್ರ ಕಾರ್ಯಾಚರಣೆ ನಡೆಯುತ್ತಿದೆ.
ಮಂಜು ಮತ್ತು ಕತ್ತಲಿನ ವಾತಾವರಣದಿಂದ ಶೋಧ ಕಾರ್ಯಕ್ಕೆ ಅಡ್ಡಿಯಾಗಿದೆ.
ಪ್ರವಾಸಿಗರ ವಲಯದಲ್ಲಿ ನಿಗೂಢ ನಾಪತ್ತೆ ಪ್ರಕರಣ ಆತಂಕ ಮೂಡಿಸಿದೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಎಸ್ಪಿ ಜಯಕುಮಾರ್ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು