5:32 AM Tuesday2 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..!

ಇತ್ತೀಚಿನ ಸುದ್ದಿ

ಪಿಯು ಫಲಿತಾಂಶದಲ್ಲಿ ಹಿಂದೆಂದೂ ಕಾಣದ ಜಯಭೇರಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಹರ್ಷ

10/04/2026, 00:14

ಬೆಂಗಳೂರು(reporterkarnataka.com): ರಾಜ್ಯದ ಶೈಕ್ಷಣಿಕ ಇತಿಹಾಸದಲ್ಲಿ ಇಂದು ಅತ್ಯಂತ ಹೆಮ್ಮೆಯ ದಿನ. ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶವು ಹಿಂದೆಂದೂ ಕಾಣದ ರೀತಿಯಲ್ಲಿ ಅತಿ ಹೆಚ್ಚು ಅಂಕಗಳೊಂದಿಗೆ ದಾಖಲೆ ನಿರ್ಮಿಸಿದೆ. ಒಟ್ಟು ಶೇ. 86.48ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ರಾಜ್ಯವು ಹೊಸ ಮೈಲಿಗಲ್ಲನ್ನು ಸ್ಥಾಪಿಸಿದೆ. ಸುದ್ದಿಗೋಷ್ಠಿಯಲ್ಲಿ ಸಂತಸ ಹಂಚಿಕೊಂಡ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, “ಪರೀಕ್ಷೆ ಬರೆದ 6,32,200 ವಿದ್ಯಾರ್ಥಿಗಳಲ್ಲಿ 5,46,698 ಮಕ್ಕಳು ತೇರ್ಗಡೆಯಾಗಿದ್ದಾರೆ. ಇದು ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲಾದ ಗರಿಷ್ಠ ಫಲಿತಾಂಶ,” ಎಂದು ತಿಳಿಸಿದರು.
ಪ್ರತಿ ವರ್ಷದಂತೆ ಈ ಬಾರಿಯೂ ಹೆಣ್ಣುಮಕ್ಕಳೇ ಮುಂಚೂಣಿಯಲ್ಲಿದ್ದಾರೆ.
ಬಾಲಕಿಯರು: ಶೇ. 88.70 (3,13,770 ವಿದ್ಯಾರ್ಥಿನಿಯರು)
ಬಾಲಕರು: ಶೇ. 83.65 (2,32,928 ವಿದ್ಯಾರ್ಥಿಗಳು)

*ವಿಭಾಗವಾರು ಸಾಧನೆ:*

ವಿಜ್ಞಾನ ವಿಭಾಗ: 2,66,071 ವಿದ್ಯಾರ್ಥಿಗಳು (ಶೇ. 86.48)

ವಾಣಿಜ್ಯ ವಿಭಾಗ: 1,82,317 ವಿದ್ಯಾರ್ಥಿಗಳು (ಶೇ. 88.04)

ಕಲಾ ವಿಭಾಗ: 98,310 ವಿದ್ಯಾರ್ಥಿಗಳು (ಶೇ. 72.86)

ವಿಶೇಷವೆಂದರೆ, ನಗರ ಪ್ರದೇಶಕ್ಕಿಂತ (ಶೇ. 85.95) ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ (ಶೇ. 87.62) ಹೆಚ್ಚು ಸಾಧನೆ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

*ಶ್ರೇಣಿವಾರು ವಿವರ:*
ಉನ್ನತ ಶ್ರೇಣಿ: 1,70,529 ಮಕ್ಕಳು

ಪ್ರಥಮ ದರ್ಜೆ: 2,95,385 ಮಕ್ಕಳು

ದ್ವಿತೀಯ ದರ್ಜೆ: 63,957 ಮಕ್ಕಳು

ಸುಮಾರು 5,577 ವಿದ್ಯಾರ್ಥಿಗಳಿಗೆ ಶೇ. 35 ರಿಂದ 33 ರವರೆಗೆ ಕೃಪಾಂಕ ನೀಡಿ ಉತ್ತೀರ್ಣಗೊಳಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವೆಬ್‌ಸೈಟ್ ಹಾಗೂ ಡಿಜಿ ಲಾಕರ್‌ನಲ್ಲಿ ಇಂದೇ ಅಂಕಪಟ್ಟಿಗಳು ಲಭ್ಯವಾಗುವಂತೆ ಮಾಡಲಾಗಿದೆ. ಇಂತಹ ಅದ್ಭುತ ಸಾಧನೆ ಮಾಡಿದ ರಾಜ್ಯದ ಸಮಸ್ತ ವಿದ್ಯಾರ್ಥಿಗಳಿಗೆ ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು