10:42 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಪಿಯು ಫಲಿತಾಂಶದಲ್ಲಿ ಹಿಂದೆಂದೂ ಕಾಣದ ಜಯಭೇರಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಹರ್ಷ

10/04/2026, 00:14

ಬೆಂಗಳೂರು(reporterkarnataka.com): ರಾಜ್ಯದ ಶೈಕ್ಷಣಿಕ ಇತಿಹಾಸದಲ್ಲಿ ಇಂದು ಅತ್ಯಂತ ಹೆಮ್ಮೆಯ ದಿನ. ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶವು ಹಿಂದೆಂದೂ ಕಾಣದ ರೀತಿಯಲ್ಲಿ ಅತಿ ಹೆಚ್ಚು ಅಂಕಗಳೊಂದಿಗೆ ದಾಖಲೆ ನಿರ್ಮಿಸಿದೆ. ಒಟ್ಟು ಶೇ. 86.48ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ರಾಜ್ಯವು ಹೊಸ ಮೈಲಿಗಲ್ಲನ್ನು ಸ್ಥಾಪಿಸಿದೆ. ಸುದ್ದಿಗೋಷ್ಠಿಯಲ್ಲಿ ಸಂತಸ ಹಂಚಿಕೊಂಡ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, “ಪರೀಕ್ಷೆ ಬರೆದ 6,32,200 ವಿದ್ಯಾರ್ಥಿಗಳಲ್ಲಿ 5,46,698 ಮಕ್ಕಳು ತೇರ್ಗಡೆಯಾಗಿದ್ದಾರೆ. ಇದು ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲಾದ ಗರಿಷ್ಠ ಫಲಿತಾಂಶ,” ಎಂದು ತಿಳಿಸಿದರು.
ಪ್ರತಿ ವರ್ಷದಂತೆ ಈ ಬಾರಿಯೂ ಹೆಣ್ಣುಮಕ್ಕಳೇ ಮುಂಚೂಣಿಯಲ್ಲಿದ್ದಾರೆ.
ಬಾಲಕಿಯರು: ಶೇ. 88.70 (3,13,770 ವಿದ್ಯಾರ್ಥಿನಿಯರು)
ಬಾಲಕರು: ಶೇ. 83.65 (2,32,928 ವಿದ್ಯಾರ್ಥಿಗಳು)

*ವಿಭಾಗವಾರು ಸಾಧನೆ:*

ವಿಜ್ಞಾನ ವಿಭಾಗ: 2,66,071 ವಿದ್ಯಾರ್ಥಿಗಳು (ಶೇ. 86.48)

ವಾಣಿಜ್ಯ ವಿಭಾಗ: 1,82,317 ವಿದ್ಯಾರ್ಥಿಗಳು (ಶೇ. 88.04)

ಕಲಾ ವಿಭಾಗ: 98,310 ವಿದ್ಯಾರ್ಥಿಗಳು (ಶೇ. 72.86)

ವಿಶೇಷವೆಂದರೆ, ನಗರ ಪ್ರದೇಶಕ್ಕಿಂತ (ಶೇ. 85.95) ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ (ಶೇ. 87.62) ಹೆಚ್ಚು ಸಾಧನೆ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

*ಶ್ರೇಣಿವಾರು ವಿವರ:*
ಉನ್ನತ ಶ್ರೇಣಿ: 1,70,529 ಮಕ್ಕಳು

ಪ್ರಥಮ ದರ್ಜೆ: 2,95,385 ಮಕ್ಕಳು

ದ್ವಿತೀಯ ದರ್ಜೆ: 63,957 ಮಕ್ಕಳು

ಸುಮಾರು 5,577 ವಿದ್ಯಾರ್ಥಿಗಳಿಗೆ ಶೇ. 35 ರಿಂದ 33 ರವರೆಗೆ ಕೃಪಾಂಕ ನೀಡಿ ಉತ್ತೀರ್ಣಗೊಳಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವೆಬ್‌ಸೈಟ್ ಹಾಗೂ ಡಿಜಿ ಲಾಕರ್‌ನಲ್ಲಿ ಇಂದೇ ಅಂಕಪಟ್ಟಿಗಳು ಲಭ್ಯವಾಗುವಂತೆ ಮಾಡಲಾಗಿದೆ. ಇಂತಹ ಅದ್ಭುತ ಸಾಧನೆ ಮಾಡಿದ ರಾಜ್ಯದ ಸಮಸ್ತ ವಿದ್ಯಾರ್ಥಿಗಳಿಗೆ ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು