ಇತ್ತೀಚಿನ ಸುದ್ದಿ
Kodagu | ಏಳನೇ ಹೊಸಕೋಟೆಯಲ್ಲಿ ಕಾಡಾನೆ ದಾಳಿ: ಅಪಾರ ಪ್ರಮಾಣದ ಹಾನಿ
10/04/2026, 17:03
ಗಿರಿಧರ್ ಕೊಂಪುಳಿರ ಮಡಿಕೇರಿ
info.reporterkarnataka@gmail.com
ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ ಸಮೀಪದ 7ನೇ ಹೊಸಕೋಟೆಯ ರೊನಾಲ್ಡ್ ಡಿಸಿಲ್ವ ಅವರ ಮಾಲಿಕತ್ವದ ತೋಟಕ್ಕೆ ಕಳೆದೆರಡು ದಿನಗಳಿಂದ ಲಗ್ಗೆಯಿಡುತ್ತಿರುವ ಕಾಡಾನೆಯಿಂದ ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಮನೆಯ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನ ಜಖಂಗೊಳಿಸಿದೆ. ಹತ್ತಕ್ಕೂ ಅಧಿಕ ತೆಂಗಿನ ಮರಗಳನ್ನು ನೆಲಕ್ಕುರುಳಿಸಿದೆ. ಇದಲ್ಲದೆ ಆನೆಯನ್ನು ಕಂಡು ಬೊಗಳುತ್ತಿದ್ದ ಮನೆಯಲ್ಲಿದ್ದ ಶ್ವಾನವನ್ನು ತುಳಿದು ತೀವ್ರವಾಗಿ ಗಾಯಗೊಳಿಸಿದೆ.


ಸುತ್ತಮುತ್ತಲಿನ ಪ್ರದೇಶದಲ್ಲಿ ಅಡ್ಡಾಡಿಕೊಂಡು ಇರುವ ಆನೆಗಳು ಜನವಸತಿ ಪ್ರದೇಶದಲ್ಲಿ ಓಡಾಡುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಭಯ ಭೀತಿಯಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.












