6:56 AM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಮಂಗಳೂರು: ವಾಹನ ಸಂಚಾರಕ್ಕೆ ನಿಷೇಧ; ಯಾವ ರಸ್ತೆ? ಕಾರಣ ಏನು? ಪರ್ಯಾಯ ಮಾರ್ಗ ವ್ಯವಸ್ಥೆ ಯಾವುದು?

14/09/2021, 09:04

ಮಂಗಳೂರು (reporterkarnataka.com.): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ನವಭಾರತ ಜಂಕ್ಷನ್‍ನಿಂದ ನಾಗರಕಟ್ಟೆ ವರೆಗೆ (ಡೊಂಗರಕೇರಿ ವೆಂಕಟರಮಣ ದೇವಸ್ಥಾನ ರಸ್ತೆ) ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದರಿಂದ ಆ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಿ ಆದೇಶ ಹೊರಡಿಸುವುದರೊಂದಿಗೆ ಸಾರ್ವಜನಿಕರ ಓಡಾಟಕ್ಕೆ ಮತ್ತು ವಾಹನಗಳ ಸುಗಮ ಸಂಚಾರಕ್ಕಾಗಿ ಬದಲಿ ಮಾರ್ಗದ ವ್ಯವಸ್ಥೆ ಮಾಡಬೇಕಾದ ಅವಶ್ಯಕತೆ ಇರುವುದನ್ನು ಮನಗಂಡು ಕಾಮಗಾರಿ ಮುಕ್ತಾಯವಾಗುವ ವರೆಗೆ ಮಂಗಳೂರಿನ ಪೊಲೀಸ್ ಆಯುಕ್ತ ಹಾಗೂ ಅಡಿಷನಲ್ ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್ ಶಶಿಕುಮಾರ್  ಅವರು ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮಾವಳಿಗಳು 1989 ರ ನಿಯಮ 221 ರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ನವಭಾರತ ಜಂಕ್ಷನ್‍ನಿಂದ ನಾಗನಕಟ್ಟೆ ವರೆಗೆ (ಡೊಂಗರಕೇರಿ ವೆಂಕಟರಮಣ ದೇವಸ್ಥಾನ ರಸ್ತೆ) ರಸ್ತೆಯಲ್ಲಿ ಇದೇ ಸೆಪ್ಟೆಂಬರ್ 9 ರಿಂದ ನವೆಂಬರ್ 7 ರವರೆಗೆ 60 ದಿನಗಳ ಕಾಲ ವಾಹನಗಳ ಸಂಚಾರದಲ್ಲಿ ತಾತ್ಕಾಲಿಕವಾಗಿ ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. 

ನಾಗನಕಟ್ಟೆ ಕಡೆಯಿಂದ ಬರುವ ವಾಹನಗಳು ಗದ್ದಕೇರಿ ಜಂಕ್ಷನ್ ಮೂಲಕ ಮುಂದುವರೆದು ರಮಣ ಪೈ ಹಾಲ್ ಸಮೀಪದ ರಸ್ತೆಯಲ್ಲಿ ಬಂದು ನವಭಾರತ್ ಸರ್ಕಲ್ ಮುಖಾಂತರ ಸಂಚರಿಸುವುದು.
ನವಭಾರತ್ ಜಂಕ್ಷನ್‍ನಿಂದ ಡೊಂಗರಕೇರಿಗೆ ಹೋಗುವ ವಾಹನಗಳು ರಮಣ ಪೈ ಹಾಲ್ ಮೂಲಕ ಗದ್ದೆಕೇರಿ ಜಂಕನ್ ಕಡೆಗೆ ಸಂಚರಿಸುವುದು.
ಕಾಮಗಾರಿ ವೇಳೆ ನವಭಾರತ ಜಂಕ್ಷನ್ ನಿಂದ ನಾಗನಕಟ್ಟೆ ವರೆಗೆ (ಡೊಂಗರಗೇರಿ ವೆಂಕಟರಮಣ ದೇವಸ್ಥಾನ ರಸ್ತೆ) ರಸ್ತೆಯಲ್ಲಿ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. 

ಈ ಆದೇಶದನ್ವಯ ಈ ರಸ್ತೆಯಲ್ಲಿ ಅವಶ್ಯವುಳ್ಳ ಸೂಚನಾ ಫಲಕಗಳನ್ನು ಮಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ಅಳವಡಿಸುವುದು ಹಾಗೂ ಸುಗಮ ಸಂಚಾರ ನಿಯಂತ್ರಣಕ್ಕೆ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದು ಮಂಗಳೂರು ಉಪ ವಿಭಾಗದ ಮಂಗಳೂರು ಸಂಚಾರ ಸಹಾಯಕ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.    

ಇತ್ತೀಚಿನ ಸುದ್ದಿ

ಜಾಹೀರಾತು