2:51 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಮಂಗಳೂರು: ವಾಹನ ಸಂಚಾರಕ್ಕೆ ನಿಷೇಧ; ಯಾವ ರಸ್ತೆ? ಕಾರಣ ಏನು? ಪರ್ಯಾಯ ಮಾರ್ಗ ವ್ಯವಸ್ಥೆ ಯಾವುದು?

14/09/2021, 09:04

ಮಂಗಳೂರು (reporterkarnataka.com.): ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ನವಭಾರತ ಜಂಕ್ಷನ್‍ನಿಂದ ನಾಗರಕಟ್ಟೆ ವರೆಗೆ (ಡೊಂಗರಕೇರಿ ವೆಂಕಟರಮಣ ದೇವಸ್ಥಾನ ರಸ್ತೆ) ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದರಿಂದ ಆ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಿ ಆದೇಶ ಹೊರಡಿಸುವುದರೊಂದಿಗೆ ಸಾರ್ವಜನಿಕರ ಓಡಾಟಕ್ಕೆ ಮತ್ತು ವಾಹನಗಳ ಸುಗಮ ಸಂಚಾರಕ್ಕಾಗಿ ಬದಲಿ ಮಾರ್ಗದ ವ್ಯವಸ್ಥೆ ಮಾಡಬೇಕಾದ ಅವಶ್ಯಕತೆ ಇರುವುದನ್ನು ಮನಗಂಡು ಕಾಮಗಾರಿ ಮುಕ್ತಾಯವಾಗುವ ವರೆಗೆ ಮಂಗಳೂರಿನ ಪೊಲೀಸ್ ಆಯುಕ್ತ ಹಾಗೂ ಅಡಿಷನಲ್ ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್ ಶಶಿಕುಮಾರ್  ಅವರು ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮಾವಳಿಗಳು 1989 ರ ನಿಯಮ 221 ರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ನವಭಾರತ ಜಂಕ್ಷನ್‍ನಿಂದ ನಾಗನಕಟ್ಟೆ ವರೆಗೆ (ಡೊಂಗರಕೇರಿ ವೆಂಕಟರಮಣ ದೇವಸ್ಥಾನ ರಸ್ತೆ) ರಸ್ತೆಯಲ್ಲಿ ಇದೇ ಸೆಪ್ಟೆಂಬರ್ 9 ರಿಂದ ನವೆಂಬರ್ 7 ರವರೆಗೆ 60 ದಿನಗಳ ಕಾಲ ವಾಹನಗಳ ಸಂಚಾರದಲ್ಲಿ ತಾತ್ಕಾಲಿಕವಾಗಿ ಬದಲಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. 

ನಾಗನಕಟ್ಟೆ ಕಡೆಯಿಂದ ಬರುವ ವಾಹನಗಳು ಗದ್ದಕೇರಿ ಜಂಕ್ಷನ್ ಮೂಲಕ ಮುಂದುವರೆದು ರಮಣ ಪೈ ಹಾಲ್ ಸಮೀಪದ ರಸ್ತೆಯಲ್ಲಿ ಬಂದು ನವಭಾರತ್ ಸರ್ಕಲ್ ಮುಖಾಂತರ ಸಂಚರಿಸುವುದು.
ನವಭಾರತ್ ಜಂಕ್ಷನ್‍ನಿಂದ ಡೊಂಗರಕೇರಿಗೆ ಹೋಗುವ ವಾಹನಗಳು ರಮಣ ಪೈ ಹಾಲ್ ಮೂಲಕ ಗದ್ದೆಕೇರಿ ಜಂಕನ್ ಕಡೆಗೆ ಸಂಚರಿಸುವುದು.
ಕಾಮಗಾರಿ ವೇಳೆ ನವಭಾರತ ಜಂಕ್ಷನ್ ನಿಂದ ನಾಗನಕಟ್ಟೆ ವರೆಗೆ (ಡೊಂಗರಗೇರಿ ವೆಂಕಟರಮಣ ದೇವಸ್ಥಾನ ರಸ್ತೆ) ರಸ್ತೆಯಲ್ಲಿ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. 

ಈ ಆದೇಶದನ್ವಯ ಈ ರಸ್ತೆಯಲ್ಲಿ ಅವಶ್ಯವುಳ್ಳ ಸೂಚನಾ ಫಲಕಗಳನ್ನು ಮಂಗಳೂರು ಸ್ಮಾರ್ಟ್ ಸಿಟಿ ವತಿಯಿಂದ ಅಳವಡಿಸುವುದು ಹಾಗೂ ಸುಗಮ ಸಂಚಾರ ನಿಯಂತ್ರಣಕ್ಕೆ ಸಿಬ್ಬಂದಿಗಳನ್ನು ನಿಯೋಜಿಸಬೇಕು ಎಂದು ಮಂಗಳೂರು ಉಪ ವಿಭಾಗದ ಮಂಗಳೂರು ಸಂಚಾರ ಸಹಾಯಕ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.    

ಇತ್ತೀಚಿನ ಸುದ್ದಿ

ಜಾಹೀರಾತು