10:13 PM Friday10 - April 2026
ಬ್ರೇಕಿಂಗ್ ನ್ಯೂಸ್
3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ

ಇತ್ತೀಚಿನ ಸುದ್ದಿ

ಸೆಲ್ಫಿ ಕ್ರೇಜ್‌ಗೆ 3 ಬಾಲಕಿಯರು ಬಲಿ: ಜಲಪಾತದಲ್ಲಿ ಫೋಟೋ ತೆಗೆಯುವಾಗ ದುರಂತ

10/04/2026, 22:13

ಹೈದರಾಬಾದ್ (reporterkarnataka.com):ಆಂಧ್ರಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ನೀರಿನಲ್ಲಿ ಈಜಾಡುತ್ತಿದ್ದಾಗಲೇ ಮೂವರು ಹದಿಹರೆಯದ ಬಾಲಕಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಆಘಾತಕಾರಿ ವಿಚಾರವೆಂದರೆ ಇವರ ಕೊನೆಕ್ಷಣಗಳು ಕ್ಯಾಮರಾದಲ್ಲಿ ಸೆರೆಯಾಗಿವೆ. ನೀರಿನಲ್ಲಿ ಫೋಟೋ ತೆಗೆಯುವ ವೇಳೆಯೇ ಈ ದುರಂತ ಸಂಭವಿಸಿದೆ.

*ಬಾಲಕಿಯರ ಕೊನೆಕ್ಷಣ ಕ್ಯಾಮರಾದಲ್ಲಿ ಸೆರೆ*
ಇಲ್ಲಿನ ಹುಕುಂಪೇಟ ಮಂಡಲದ ಬುರ್ಜಾ ಪಂಚಾಯತ್‌ ಬಳಿಯ ಮುಲ್ಲುನ್ಗುಮ್ಮಿ ಎಂಬ ಜಲಪಾತದ ಬಳಿ ಈ ದುರಂತ ಸಂಭವಿಸಿದೆ. ರಜಾ ದಿನವಾಗಿದ್ದರಿಂದ ಜಂಬವಲಸಾ ಗ್ರಾಮದ ಐವರು ಹುಡುಗಿಯರು ಈ ಜಲಪಾತವನ್ನು ನೋಡುವುದಕ್ಕೆ ಆಗಮಿಸಿದ್ದರು. ಈ ಸಮಯದಲ್ಲಿ ನೀರಿನಲ್ಲಿ ಈಜಾಡುತ್ತಾ ಎಂಜಾಯ್ ಮಾಡುತ್ತಿದ್ದಾಗ ಫೋಟೋ ಕ್ಲಿಕ್ಕಿಸಲು ಮುಂದಾಗಿದ್ದು, ಇದೇ ವೇಳೆ ಈ ದುರಂತ ಸಂಭವಿಸಿದೆ.
ಪೊಲೀಸರ ಪ್ರಕಾರ, ಈ ಹುಡುಗಿಯರು ಸೇತುವೆಯ ಬಳಿಯೇ ಫೋಟೋ ಹಾಗೂ ಸೆಲ್ಫಿ ವೀಡಿಯೋ ಮಾಡಿದ್ದಾರೆ. ಬಳಿಕ ಐವರಲ್ಲಿ ಮೂವರು ಹುಡುಗಿಯರು ಜಲಪಾತದ ಮಧ್ಯೆ ಇರುವ ದೊಡ್ಡ ಬಂಡೆಯೊಂದನ್ನು ಏರಿದ್ದಾರೆ. ಇದೇ ವೇಳೆ ಅವರು ಅಲ್ಲಿಂದ ಆಯತಪ್ಪಿ ನೀರಿಗೆ ಬಿದ್ದಿದ್ದು, ನೀರಿನಲ್ಲಿ ಮುಳುಗಿ ಹೋಗಿದ್ದಾರೆ.
ಅಲ್ಲಿದ್ದ ಸ್ಥಳೀಯರು ಅವರನ್ನು ರಕ್ಷಿಸಲು ಪ್ರಯತ್ನಿಸಿದರಾದರೂ ನೀರಿನ ಹರಿವಿನ ರಭಸಕ್ಕೆ ಸಿಲುಕಿ ಬಾಲಕಿಯರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಅವರ ಮೃತದೇಹಗಳನ್ನು ನಂತರ ನೀರಿನಿಂದ ಮೇಲೆತ್ತಲಾಗಿದೆ. ಹೀಗೆ ನೀರಿನಲ್ಲಿ ಮುಳುಗಿ ಪ್ರಾಣಬಿಟ್ಟ ಹರೆಯದ ಬಾಲಕಿಯರನ್ನು 17 ವರ್ಷದ ತ್ರಿಶಾ 16 ವರ್ಷದ ರತ್ನಕುಮಾರಿ, ಹಾಗೂ 16 ವರ್ಷದ ಪವಿತ್ರಾ ಎಂದು ಗುರುತಿಸಲಾಗಿದೆ. ಉಳಿದಿಬ್ಬರು ಬಾಲಕಿಯರು ಸುರಕ್ಷಿತವಾಗಿದ್ದಾರೆ.
ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಹಾಗೂ ಕಂದಾಯ ಅಧಿಕಾರಿಗಳು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ. ಈ ಘಟನೆ ಈಗ ಸ್ಥಳೀಯರಲ್ಲಿ ತೀವ್ರ ಕಳವಳ ಮೂಡಿಸಿದೆ. ಘಟನೆ ನಡೆದ ಸ್ಥಳವು ಅಲ್ಲುರಿ ಜಿಲ್ಲೆಯಲ್ಲಿ ಬರುವ ಅತೀ ಸುಂದರವಾದ ಜಲಪಾತವಾಗಿದ್ದು, ಸುಂದರವಾದ ನೈಸರ್ಗಿಕ ದೃಶ್ಯಗಳಿಂದ ಗಮನ ಸೆಳೆಯುತ್ತಿದೆ. ಇಲ್ಲಿ ಈ ಹಿಂದೆಯೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದಂತಹ ಹಲವು ಘಟನೆಗಳು ನಡೆದಿದ್ದವು.

ಇತ್ತೀಚಿನ ಸುದ್ದಿ

ಜಾಹೀರಾತು