10:07 AM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಸೆ. 20ರಂದು ಕೃಷ್ಣಾ ಸಕ್ಕರೆ ಕಾರ್ಖಾನೆ ಮುತ್ತಿಗೆ: ರಾಜ್ಯ ರೈತ ಸಂಘ ಎಚ್ಚರಿಕೆ

14/09/2021, 11:51

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರೈತರ ಬಾಕಿ ಬಿಲ್ ಪಾವತಿಗೆ ಗಡವು ನೀಡಿ ಬಾಕಿ ಬಿಲ್ಲನ್ನು ಪಾವತಿಸಿ ಎಂದು ನಮ್ಮ ಸಂಘದ ವತಿಯಿಂದ ಹಲವು ಬಾರಿ ಮನವಿ ಮಾಡಿದ್ದರೂ ಸಹ ಇಲ್ಲಿಯವರೆಗೆ ಕಾರ್ಖಾನೆಯವರಿಂದ ಯಾವುದೇ ರೀತಿಯ ಸ್ಪಂದನೆ ಬಂದಿಲ್ಲ. ಅದಕ್ಕಾಗಿ ರೈತರ ಹಿತಕ್ಕಾಗಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಅಥಣಿ ಘಟಕದ ವತಿಯಿಂದ ಸೆ. 20 ರಂದು ಕೃಷ್ಣಾ ಸಕ್ಕರೆ ಕಾರ್ಖಾನೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ಮಾಡಲಾಗುತ್ತದೆ ಎಂದು ರಾಜ್ಯ ರೈತ ಸಂಘದ ಗೌರವ ಅಧ್ಯಕ್ಷ ಶಶಿಕಾಂತ ಪಡಸಲಗಿ ಹೇಳಿದರು.

ಅವರು ಸ್ಥಳೀಯ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ನಮ್ಮದೇ ಸಹಕಾರಿ ರೈತರ ಪ್ಯಾಕ್ಟರಿಯಾದ ಕೃಷ್ಣಾ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯವರು ರೈತರು ಪೂರೈಸಿದ ಕಬ್ಬಿಗೆ 2018-19 ನೇ ಸಾಲಿನಲ್ಲಿ 300 ರೂ, 2020-21 ನೇ ಸಾಲಿನಲ್ಲಿ 200 ಬಾಕಿ ಹಣ ಪಾವತಿಸಿಲ್ಲ ಹಾಗೂ 2021-22ನೇ ಸಾಲಿನಲ್ಲಿ ಪ್ರಾರಂಭದ ಮುಂಚಿತವಾಗಿ ದರ ನಿಗದಿ, ಸಕ್ಕರೆ ಪ್ರಮಾಣ ಹೆಚ್ಚಳ, ಶೇರುಗಳ ಹೆಚ್ಚಳ ಮಾಡಲು ಆಗ್ರಹಿಸಿ ಬ್ರಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದರು. 

ಜಿಲ್ಲೆಯ ಸಾವಿರಾರು  ರೈತರು ಸೇರಿಕೊಂಡು ಸೆ. 20 ರಂದು ದರೂರದ ಜೋಗಪ್ಪನ ಗುಡಿ ವ್ರತ್ತ ದಿಂದ ಕಾರ್ಖಾನೆ ಗೇಟಿನ ವರೆಗೆ ಬೃಹತ್ ಪ್ರತಿಭಟನೆ ಮಾಡಿ ಕಾರ್ಖಾನೆ ಮುತ್ತಿಗೆ ಹಾಕುವುದಾಗಿ ನಿರ್ಧಾರ ಮಾಡಿದ್ದೇವೆ ಎಂದು ತಿಳಿಸಿದರು.

ನಂತರದಲ್ಲಿ ಎಂ. ಸಿ. ತಾಂಬೋಳಿ ಹಾಗೂ ಎ ಬಿ ಹಳ್ಳೂರ ಅವರು ಪ್ರತಿಭಟನೆ ಕುರಿತು ಮಾಹಿತಿ ನೀಡಿ ಎಲ್ಲ ರೈತರು ಪಾಲ್ಗೊಳ್ಳಿ ಎಂದು ಕರೆ ನೀಡಿದರು.

ಈ ವೇಳೆ ಪ್ರಕಾಶ ಪೂಜಾರಿ, ರಾವಸಾಬ ಜಗರತಾಪ,ಪ್ರಕಾಶ ಪೂಜಾರಿ, ಡಿ. ಎಂ. ನಾಯಿಕ, ಗೋಪಾಲ ಮಿಸಾಳ, ರಾವಸಾಬ ಕೋಳಿ, ದಶರಥ ನಾಯಿಕ ಸೇರಿದಂತೆ ಹಲವು ರೈತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು