5:34 AM Thursday15 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಸೆ. 20ರಂದು ಕೃಷ್ಣಾ ಸಕ್ಕರೆ ಕಾರ್ಖಾನೆ ಮುತ್ತಿಗೆ: ರಾಜ್ಯ ರೈತ ಸಂಘ ಎಚ್ಚರಿಕೆ

14/09/2021, 11:51

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರೈತರ ಬಾಕಿ ಬಿಲ್ ಪಾವತಿಗೆ ಗಡವು ನೀಡಿ ಬಾಕಿ ಬಿಲ್ಲನ್ನು ಪಾವತಿಸಿ ಎಂದು ನಮ್ಮ ಸಂಘದ ವತಿಯಿಂದ ಹಲವು ಬಾರಿ ಮನವಿ ಮಾಡಿದ್ದರೂ ಸಹ ಇಲ್ಲಿಯವರೆಗೆ ಕಾರ್ಖಾನೆಯವರಿಂದ ಯಾವುದೇ ರೀತಿಯ ಸ್ಪಂದನೆ ಬಂದಿಲ್ಲ. ಅದಕ್ಕಾಗಿ ರೈತರ ಹಿತಕ್ಕಾಗಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಅಥಣಿ ಘಟಕದ ವತಿಯಿಂದ ಸೆ. 20 ರಂದು ಕೃಷ್ಣಾ ಸಕ್ಕರೆ ಕಾರ್ಖಾನೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ಮಾಡಲಾಗುತ್ತದೆ ಎಂದು ರಾಜ್ಯ ರೈತ ಸಂಘದ ಗೌರವ ಅಧ್ಯಕ್ಷ ಶಶಿಕಾಂತ ಪಡಸಲಗಿ ಹೇಳಿದರು.

ಅವರು ಸ್ಥಳೀಯ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ನಮ್ಮದೇ ಸಹಕಾರಿ ರೈತರ ಪ್ಯಾಕ್ಟರಿಯಾದ ಕೃಷ್ಣಾ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯವರು ರೈತರು ಪೂರೈಸಿದ ಕಬ್ಬಿಗೆ 2018-19 ನೇ ಸಾಲಿನಲ್ಲಿ 300 ರೂ, 2020-21 ನೇ ಸಾಲಿನಲ್ಲಿ 200 ಬಾಕಿ ಹಣ ಪಾವತಿಸಿಲ್ಲ ಹಾಗೂ 2021-22ನೇ ಸಾಲಿನಲ್ಲಿ ಪ್ರಾರಂಭದ ಮುಂಚಿತವಾಗಿ ದರ ನಿಗದಿ, ಸಕ್ಕರೆ ಪ್ರಮಾಣ ಹೆಚ್ಚಳ, ಶೇರುಗಳ ಹೆಚ್ಚಳ ಮಾಡಲು ಆಗ್ರಹಿಸಿ ಬ್ರಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದರು. 

ಜಿಲ್ಲೆಯ ಸಾವಿರಾರು  ರೈತರು ಸೇರಿಕೊಂಡು ಸೆ. 20 ರಂದು ದರೂರದ ಜೋಗಪ್ಪನ ಗುಡಿ ವ್ರತ್ತ ದಿಂದ ಕಾರ್ಖಾನೆ ಗೇಟಿನ ವರೆಗೆ ಬೃಹತ್ ಪ್ರತಿಭಟನೆ ಮಾಡಿ ಕಾರ್ಖಾನೆ ಮುತ್ತಿಗೆ ಹಾಕುವುದಾಗಿ ನಿರ್ಧಾರ ಮಾಡಿದ್ದೇವೆ ಎಂದು ತಿಳಿಸಿದರು.

ನಂತರದಲ್ಲಿ ಎಂ. ಸಿ. ತಾಂಬೋಳಿ ಹಾಗೂ ಎ ಬಿ ಹಳ್ಳೂರ ಅವರು ಪ್ರತಿಭಟನೆ ಕುರಿತು ಮಾಹಿತಿ ನೀಡಿ ಎಲ್ಲ ರೈತರು ಪಾಲ್ಗೊಳ್ಳಿ ಎಂದು ಕರೆ ನೀಡಿದರು.

ಈ ವೇಳೆ ಪ್ರಕಾಶ ಪೂಜಾರಿ, ರಾವಸಾಬ ಜಗರತಾಪ,ಪ್ರಕಾಶ ಪೂಜಾರಿ, ಡಿ. ಎಂ. ನಾಯಿಕ, ಗೋಪಾಲ ಮಿಸಾಳ, ರಾವಸಾಬ ಕೋಳಿ, ದಶರಥ ನಾಯಿಕ ಸೇರಿದಂತೆ ಹಲವು ರೈತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು