2:45 PM Saturday30 - May 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ

ಇತ್ತೀಚಿನ ಸುದ್ದಿ

ಲೇಡಿಗೋಶನ್ ಆಸ್ಪತ್ರೆಗೆ ಪವರ್ ಗ್ರಿಡ್ ಕಾರ್ಪೊರೇಷನ್‌ ಸಿಎಸ್‌ಆರ್ ನಿಧಿಯಡಿ 68 ಲಕ್ಷ ಮೌಲ್ಯದ ವೈದ್ಯಕೀಯ ಸಲಕರಣೆ ಹಸ್ತಾಂತರ

11/04/2026, 20:13

ಮಂಗಳೂರು(reporterkarnataka.com): ಮಂಗಳೂರು ನಗರದ ಲೇಡಿಗೋಶನ್ ಆಸ್ಪತ್ರೆಗೆ ಪವರ್ ಗ್ರಿಡ್ ಕಾರ್ಪೊರೇಷನ್‌ ಇಂಡಿಯಾ ತನ್ನ ಸಿಎಸ್‌ಆರ್ ನಿಧಿಯಡಿ ನೀಡಿದ ₹68.80 ಲಕ್ಷ ಮೌಲ್ಯದ ವೈದ್ಯಕೀಯ ಸಲಕರಣೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಸ್ತಾಂತರಿಸಿದರು.
ನಂತರ ಮಾತನಾಡಿದ ಅವರು, ‘ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳು ಇಡೀ ರಾಜ್ಯಕ್ಕೆ ವೈದ್ಯಕೀಯ ಸೇವೆ ನೀಡುತ್ತಿವೆ.ಹಲವು ಜಿಲ್ಲೆಗಳಿಂದ ರೋಗಿಗಳು ಚಿಕಿತ್ಸೆಗಾಗಿ ಇಲ್ಲಿಗೆ ಬರುತ್ತಾರೆ. ಲೇಡಿಗೋಶನ್ ಆಸ್ಪತ್ರೆಯಲ್ಲಿ ತಿಂಗಳಿಗೆ 500- 600 ಹೆರಿಗೆಗಳು ಆಗುತ್ತವೆ. ವೆನ್ಲಾಕ್ ಆಸ್ಪತ್ರೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದ್ದು, ₹70 ಲಕ್ಷ ವೆಚ್ಚದಲ್ಲಿ ಒಪಿಡಿ ನಿರ್ಮಾಣವಾಗುತ್ತಿದೆ. ಆಸ್ಪತ್ರೆ ಕಟ್ಟಡಗಳ ನಡುವೆ ಲಿಂಕ್ ಸೇತುವೆ ನಿರ್ಮಾಣ ಆಗಬೇಕಾಗಿದೆ. ವೆನ್ಲಾಕ್ ಆಸ್ಪತ್ರೆಯ 1 ಲಕ್ಷ ಚದರ ಅಡಿ ಜಾಗದಲ್ಲಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೆಎಂಸಿ ಆಸ್ಪತ್ರೆ ಮಾಡಲಿದೆ ಎಂದರು.
ಮೆಸ್ಕಾಂ ಅಧ್ಯಕ್ಷ ಹರೀಶ್‌ ಕುಮಾರ್, ಡಿಎಚ್‌ಒ ಡಾ. ತಿಮ್ಮಯ್ಯ, ವೆನ್ಲಾಕ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಶಿವಪ್ರಕಾಶ್, ಕೆಎಂಸಿ ಮಂಗಳೂರಿನ ಡೀನ್ ಡಾ. ಉನ್ನಿಕೃಷ್ಣನ್ ಉಪಸ್ಥಿತರಿದ್ದರು. ಪವರ್ ಗ್ರಿಡ್ ಕಾರ್ಪೊರೇಷನ್‌ನ ಅಧಿಕಾರಿ ಗಣೇಶನ್ ಡಿ. ಅವರನ್ನು ಸನ್ಮಾನಿಸಲಾಯಿತು. ಲೇಡಿಗೋಶನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದುರ್ಗಾಪ್ರಸಾದ್ ಎಂ. ಆರ್ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು