7:25 AM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಲೇಡಿಗೋಶನ್ ಆಸ್ಪತ್ರೆಗೆ ಪವರ್ ಗ್ರಿಡ್ ಕಾರ್ಪೊರೇಷನ್‌ ಸಿಎಸ್‌ಆರ್ ನಿಧಿಯಡಿ 68 ಲಕ್ಷ ಮೌಲ್ಯದ ವೈದ್ಯಕೀಯ ಸಲಕರಣೆ ಹಸ್ತಾಂತರ

11/04/2026, 20:13

ಮಂಗಳೂರು(reporterkarnataka.com): ಮಂಗಳೂರು ನಗರದ ಲೇಡಿಗೋಶನ್ ಆಸ್ಪತ್ರೆಗೆ ಪವರ್ ಗ್ರಿಡ್ ಕಾರ್ಪೊರೇಷನ್‌ ಇಂಡಿಯಾ ತನ್ನ ಸಿಎಸ್‌ಆರ್ ನಿಧಿಯಡಿ ನೀಡಿದ ₹68.80 ಲಕ್ಷ ಮೌಲ್ಯದ ವೈದ್ಯಕೀಯ ಸಲಕರಣೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಸ್ತಾಂತರಿಸಿದರು.
ನಂತರ ಮಾತನಾಡಿದ ಅವರು, ‘ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳು ಇಡೀ ರಾಜ್ಯಕ್ಕೆ ವೈದ್ಯಕೀಯ ಸೇವೆ ನೀಡುತ್ತಿವೆ.ಹಲವು ಜಿಲ್ಲೆಗಳಿಂದ ರೋಗಿಗಳು ಚಿಕಿತ್ಸೆಗಾಗಿ ಇಲ್ಲಿಗೆ ಬರುತ್ತಾರೆ. ಲೇಡಿಗೋಶನ್ ಆಸ್ಪತ್ರೆಯಲ್ಲಿ ತಿಂಗಳಿಗೆ 500- 600 ಹೆರಿಗೆಗಳು ಆಗುತ್ತವೆ. ವೆನ್ಲಾಕ್ ಆಸ್ಪತ್ರೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದ್ದು, ₹70 ಲಕ್ಷ ವೆಚ್ಚದಲ್ಲಿ ಒಪಿಡಿ ನಿರ್ಮಾಣವಾಗುತ್ತಿದೆ. ಆಸ್ಪತ್ರೆ ಕಟ್ಟಡಗಳ ನಡುವೆ ಲಿಂಕ್ ಸೇತುವೆ ನಿರ್ಮಾಣ ಆಗಬೇಕಾಗಿದೆ. ವೆನ್ಲಾಕ್ ಆಸ್ಪತ್ರೆಯ 1 ಲಕ್ಷ ಚದರ ಅಡಿ ಜಾಗದಲ್ಲಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೆಎಂಸಿ ಆಸ್ಪತ್ರೆ ಮಾಡಲಿದೆ ಎಂದರು.
ಮೆಸ್ಕಾಂ ಅಧ್ಯಕ್ಷ ಹರೀಶ್‌ ಕುಮಾರ್, ಡಿಎಚ್‌ಒ ಡಾ. ತಿಮ್ಮಯ್ಯ, ವೆನ್ಲಾಕ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಶಿವಪ್ರಕಾಶ್, ಕೆಎಂಸಿ ಮಂಗಳೂರಿನ ಡೀನ್ ಡಾ. ಉನ್ನಿಕೃಷ್ಣನ್ ಉಪಸ್ಥಿತರಿದ್ದರು. ಪವರ್ ಗ್ರಿಡ್ ಕಾರ್ಪೊರೇಷನ್‌ನ ಅಧಿಕಾರಿ ಗಣೇಶನ್ ಡಿ. ಅವರನ್ನು ಸನ್ಮಾನಿಸಲಾಯಿತು. ಲೇಡಿಗೋಶನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ದುರ್ಗಾಪ್ರಸಾದ್ ಎಂ. ಆರ್ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು