10:33 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ದಿಢೀರ್ ಆಗಿ ಎದುರಾದ ಕಾಡಾನೆ: ಸ್ಕೂಟರ್ ಪಲ್ಟಿ ಸವಾರನಿಗೆ ಗಾಯ

11/04/2026, 21:12

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಟ್ಟ ಸಮೀಪ ಕಾಯಿಮಾನಿ ಬಳಿ ರಸ್ತೆ ದಾಟುತ್ತಿದ್ದ ಕಾಡಾನೆಯನ್ನು ಕಂಡು ಭಯ ಭೀತಗೊಂಡ ದ್ವಿಚಕ್ರ ವಾಹನ ಸವಾರ ನಿಯಂತ್ರಣ ತಪ್ಪಿ ಬೈಕಿನಿಂದ ಬಿದ್ದು ಗಾಯಗೊಂಡಿದ್ದಾರೆ.
ಕಾಯಿಮಾನಿ ಕಾಫಿ ಮಿಲ್ ಸಮೀಪ ಘಟನೆ ನಡೆದಿದೆ.
ಪೂಜೆಕಲ್ಲ್ ನಿವಾಸಿ ಅರ್ಮುಗಮ್(65) ಗಾಯಗೊಂಡ ಸ್ಕೂಟರ್ ಸವಾರ.

ಅಲ್ಲಿಯೇ ಶ್ರೀಮಂಗಲ ಅರಣ್ಯ ಇಲಾಖೆಯ ಸಿಬ್ಬಂದಿ ಬೀಟ್ ‘ನಲ್ಲಿದ್ದವರಿಗೆ ವಿಷಯ ತಿಳಿದು, ಕುಟ್ಟ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ.
ಶಾಸಕ ಪೊನ್ನಣ್ಣ ಆದೇಶದಂತೆ ಮುಖ್ಯ ರಸ್ತೆ ಗಳಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳಿಂದ ಬೀಟ್ ನಲ್ಲಿರುವಂತೆ ಸೂಚನೆ. ಸಾರ್ವಜನಿಕರಿಂದ ಕಾಡಾನೆ ಇರುವಿಕೆ ಬಗ್ಗೆ ಮಾಹಿತಿ ಬಂದ ತಕ್ಷಣ ನಿಗಾ ಇಡುವಂತೆ ಸೂಚಿಸಿದ ಹಿನ್ನಲೆ, ಮುಖ್ಯ ರಸ್ತೆ, ಕಾಡಾನೆ ಇರುವಿಕೆಯ ಸುಳಿವು ಇರುವೆಡೆ ಬೀಟ್ ಕೈಗೊಳ್ಳುವಂತೆ ಸೂಚನೆ.
ಈ ಹಿನ್ನಲೆ ಶ್ರೀಮಂಗಲ ವಲಯ ಅರಣ್ಯಧಿಕಾರಿ ಅರವಿಂದ್ ನೇತೃತ್ವದಲ್ಲಿ ಕುಟ್ಟ -ಕಾಯಿಮಾನಿ ಸುತ್ತಮುತ್ತ ಬೆಳ್ಳಿಗ್ಗೆ 6 ರಿಂದ ಸಂಜೆ 8 ರವರೆಗೆ ಅರಣ್ಯ ಸಿಬ್ಬಂದಿ ಬೀಟ್ ನಿಯೋಜಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು