2:21 PM Tuesday14 - April 2026
ಬ್ರೇಕಿಂಗ್ ನ್ಯೂಸ್
Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ

ಇತ್ತೀಚಿನ ಸುದ್ದಿ

Mangaluru | ಸುಳ್ಯ ಸಮೀಪ ತೊಟದ ಬಾವಿಗೆ ಬಿದ್ದ ಮರಿಯಾನೆ ರಕ್ಷಣೆ

14/04/2026, 14:02

ಸುಳ್ಯ(reporterkarnataka.com): ಸುಳ್ಯ ಸಮೀಪದ ಪೆರಾಜೆ ಕಲ್ಚರ್ಪೆ ಬಳಿ ಭಾನುವಾರ ರಾತ್ರಿ ಕಾಡಾನೆಯೊಂದು ಬಾವಿಗೆ ಬಿದ್ದಿದ್ದು, ಅದನ್ನು ರಕ್ಷಣೆ ಮಾಡಲಾಯಿತು.
ಕಲ್ಚರ್ಪೆಯ ದಮಯಂತಿ ಅವರ ಮನೆಯ ಸಮೀಪದ ತೊಟದ ಬಳಿ ಬಾವಿ ಇತ್ತು. ಈ ಬಾವಿಯು ಸುಮಾರು 16 ಅಡಿಗಳಷ್ಟು ಆಳವಿದ್ದು, ಅದರ ನೀರು ಬೇಸಿಗೆಯಲ್ಲಿ ಬತ್ತುತ್ತದೆ. ಆಹಾ ರ ಅರಸಿ ತೋಟದ ಕಡೆಗೆ ಬಂದಿದ್ದ ಆನೆಯ ಹಿಂಡಿನಿಂದ ತಪ್ಪಿಸಿಕೊಂಡಿದ್ದ ಮರಿಯಾನೆ ಬಾವಿಯೊಳಗೆ ಬಿದ್ದಿತ್ತು ಎಂದು ಸ್ಥಳಿಯರು ತಿಳಿಸಿದ್ದಾರೆ.

ಆನೆ ಬಾವಿಗೆ ಬಿದ್ದ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದೆವು. ಅವರು ಹಿಟಾಚಿ ಯಂತ್ರವನ್ನು ತರಿಸಿ ಬಾವಿಯಿಂದ ಆನೆ ಮರಿಯು ಮೇಲಕ್ಕೆ ಬರಲು ದಾರಿ ಮಾಡಿಕೊಟ್ಟರು. ಬೆಳಿಗ್ಗೆ ಆರಂಭವಾದ ರಕ್ಷಣಾ ಕಾರ್ಯಾಚರಣೆ ಸಂಜೆ 4.30ರ ವರೆಗೂ ಮುಂದುವರಿದಿತ್ತು. ಬಾವಿಯಿಂದ ಮೇಲಕ್ಕೆ ಬಂದ ಆನೆಯು ಕಾಡನ್ನು ಸೇರಿದೆ ಎಂದು ಅವರು ಮಾಹಿತಿ ನೀಡಿದರು.
‘ಎರಡು ದಿನಗಳ ಹಿಂದೆ ಕಲ್ಚರ್ಪೆ ಪರಿಸರದಲ್ಲಿ ಆನೆಗಳ ಹಿಂಡು ಕಾಣಿಸಿಕೊಂಡಿತ್ತು. ಆ ಹಿಂಡಿನಲ್ಲೂ ಒಂದು ಮರಿಯಾನೆ ಇತ್ತು. ಆ ಮರಿಯಾನೆಯೇ ಬಾವಿಗೆ ಬಿದ್ದಿರುವ ಸಾಧ್ಯತೆ ಇದೆ’ ಎಂದು ಸ್ಥಳೀಯರೊಬ್ಬರು ತಿಳಿಸಿದ್ದಾರೆ.
ಅರಣ್ಯ ಇಲಾಖೆ ತಂಡ ಸ್ಥಳದಲ್ಲೇ ಇದ್ದು, ಈ ಪರಿಸರದಲ್ಲಿ ಕಾಡಾನೆಗಳ ಚಲನವಲನಗಳ ಮೇಲೆ ನಿಗಾ ಇಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು