6:48 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

Mangaluru | ಸುಳ್ಯ ಸಮೀಪ ತೊಟದ ಬಾವಿಗೆ ಬಿದ್ದ ಮರಿಯಾನೆ ರಕ್ಷಣೆ

14/04/2026, 14:02

ಸುಳ್ಯ(reporterkarnataka.com): ಸುಳ್ಯ ಸಮೀಪದ ಪೆರಾಜೆ ಕಲ್ಚರ್ಪೆ ಬಳಿ ಭಾನುವಾರ ರಾತ್ರಿ ಕಾಡಾನೆಯೊಂದು ಬಾವಿಗೆ ಬಿದ್ದಿದ್ದು, ಅದನ್ನು ರಕ್ಷಣೆ ಮಾಡಲಾಯಿತು.
ಕಲ್ಚರ್ಪೆಯ ದಮಯಂತಿ ಅವರ ಮನೆಯ ಸಮೀಪದ ತೊಟದ ಬಳಿ ಬಾವಿ ಇತ್ತು. ಈ ಬಾವಿಯು ಸುಮಾರು 16 ಅಡಿಗಳಷ್ಟು ಆಳವಿದ್ದು, ಅದರ ನೀರು ಬೇಸಿಗೆಯಲ್ಲಿ ಬತ್ತುತ್ತದೆ. ಆಹಾ ರ ಅರಸಿ ತೋಟದ ಕಡೆಗೆ ಬಂದಿದ್ದ ಆನೆಯ ಹಿಂಡಿನಿಂದ ತಪ್ಪಿಸಿಕೊಂಡಿದ್ದ ಮರಿಯಾನೆ ಬಾವಿಯೊಳಗೆ ಬಿದ್ದಿತ್ತು ಎಂದು ಸ್ಥಳಿಯರು ತಿಳಿಸಿದ್ದಾರೆ.

ಆನೆ ಬಾವಿಗೆ ಬಿದ್ದ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದೆವು. ಅವರು ಹಿಟಾಚಿ ಯಂತ್ರವನ್ನು ತರಿಸಿ ಬಾವಿಯಿಂದ ಆನೆ ಮರಿಯು ಮೇಲಕ್ಕೆ ಬರಲು ದಾರಿ ಮಾಡಿಕೊಟ್ಟರು. ಬೆಳಿಗ್ಗೆ ಆರಂಭವಾದ ರಕ್ಷಣಾ ಕಾರ್ಯಾಚರಣೆ ಸಂಜೆ 4.30ರ ವರೆಗೂ ಮುಂದುವರಿದಿತ್ತು. ಬಾವಿಯಿಂದ ಮೇಲಕ್ಕೆ ಬಂದ ಆನೆಯು ಕಾಡನ್ನು ಸೇರಿದೆ ಎಂದು ಅವರು ಮಾಹಿತಿ ನೀಡಿದರು.
‘ಎರಡು ದಿನಗಳ ಹಿಂದೆ ಕಲ್ಚರ್ಪೆ ಪರಿಸರದಲ್ಲಿ ಆನೆಗಳ ಹಿಂಡು ಕಾಣಿಸಿಕೊಂಡಿತ್ತು. ಆ ಹಿಂಡಿನಲ್ಲೂ ಒಂದು ಮರಿಯಾನೆ ಇತ್ತು. ಆ ಮರಿಯಾನೆಯೇ ಬಾವಿಗೆ ಬಿದ್ದಿರುವ ಸಾಧ್ಯತೆ ಇದೆ’ ಎಂದು ಸ್ಥಳೀಯರೊಬ್ಬರು ತಿಳಿಸಿದ್ದಾರೆ.
ಅರಣ್ಯ ಇಲಾಖೆ ತಂಡ ಸ್ಥಳದಲ್ಲೇ ಇದ್ದು, ಈ ಪರಿಸರದಲ್ಲಿ ಕಾಡಾನೆಗಳ ಚಲನವಲನಗಳ ಮೇಲೆ ನಿಗಾ ಇಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು