3:23 PM Tuesday21 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ…

ಇತ್ತೀಚಿನ ಸುದ್ದಿ

ಮಡಿಕೇರಿ | ಬೆಟ್ಟತ್ತೂರು ಗ್ರಾಮದ ಕೊಂಪುಳಿ ಮನೆಯಲ್ಲಿ ಅದ್ದೂರಿಯಾಗಿ ನಡೆದ “ಧರ್ಮ ದೈವಗಳ” ಆರಾಧನೆ

15/04/2026, 04:51

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಮಡಿಕೇರಿ ತಾಲ್ಲೂಕು ಬೆಟ್ಟತೂರು ಗ್ರಾಮದಲ್ಲಿ ಕೊಂಪುಳಿ ಕುಟುಂಬದವರು ಇದೆ ಮೊದಲ ಭಾರಿಗೆ ನಡೆಸಿದ ಎರಡು ದಿನಗಳ ಧರ್ಮ ದೈವಗಳ ಆರಾಧನೆ ಅದ್ದೂರಿಯಾಗಿ ನೆರವೇರಿತು. ಇಲ್ಲಿವರೆಗೆ ಕೇವಲ ಕುಟುಂಬದ ಕುಲದೇವರು ವೆಂಕಟರಮಣ ಹರಿಸೇವೆ ಗೆ ಸೀಮಿತವಾಗಿದ್ದ ಆಚರಣೆಗಳು ಇದೀಗ ಕುಟುಂಬದ ಅಭಿವೃದ್ಧಿ ಹಾಗೂ ಸೂಕ್ತ ಸಂಕಷ್ಟ ಪರಿಹಾರವಾಗಿ ಕಾರ್ಯಗಳು ಯಶಸ್ವಿಯಾಗಿ ನಡೆದವು.


ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಗುರುಕಾರಣ ದಿಂದ ಆರಂಭವಾಗಿ ಕುಕ್ಕೆತಿ ಮತ್ತು ಬಲ್ಲು, ಪಾಷಾಣ ಮೂರ್ತಿ ವರ್ಣರ ಪಂಜುರ್ಲಿ, ರಾಜಗುಳಿಗ ಭಾನುವಾರ ಬೆಳಗಿನ ಜಾವದ ವರೆಗೆ ನಡೆದಿದ್ದು, ಮರುದಿನ ರುದ್ರ ಚಾಮುಂಡಿ (ಧರ್ಮ ದೈವ ) ಕೋಲ ನಡೆದು ಕುಟುಂಬಸ್ಥರಿಗೆ ಪರಿಹಾರ ನೀಡಿ ಮುಂದಿನ ದೈವ ಕಾರ್ಯಗಳನ್ನು ನಡೆಸುವ ಬಗ್ಗೆ ಮಾರ್ಗದರ್ಶನ ನೀಡಲಾಯಿತು. ಎರಡು ದಿಂದ ಈ ಕಾರ್ಯಕ್ರಮಕ್ಕೆ ಗ್ರಾಮಸ್ಥರು, ಕುಟುಂಬಸ್ಥರು, ನೆಂಟರಿಷ್ಟರು ಸಹಸ್ರ ಸಂಖ್ಯೆಯಲಿ ಬಂದು ಉತ್ಸವಕ್ಕೆ ಸಾಕ್ಷಿಯಾದರು.

ಇತ್ತೀಚಿನ ಸುದ್ದಿ

ಜಾಹೀರಾತು