4:04 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಅಂಬೇಡ್ಕರ್ ಜಯಂತಿ ಮೆರವಣಿಗೆ ಮೇಲೆ ಕುಡುಕ ಚಾಲಕನಿಂದ ಕಾರು ಚಲಾವಣೆ: ಬಾಲಕಿ ಸ್ಥಳದಲ್ಲೇ ಸಾವು; 7 ಮಂದಿಗೆ ಗಾಯ

15/04/2026, 19:09

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಕುಡುಕ ಕಾರು ಚಾಲಕ ಮೆರವಣಿಗೆಯಲ್ಲಿದ್ದವರ ಮೇಲೆ ಕಾರು ಚಾಲನೆ ಮಾಡಿದ ಪರಿಣಾಮ 7 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರ 7 ಮಂದಿ ಗಾಯಗೊಂಡಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಬಿಳೇಕಲ್ಲು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.
ಮೃತ ಬಾಲಕಿಯನ್ನ ಸಾನ್ವಿ(7) ಎಂದು ಗುರುತಿಸಲಾಗಿದೆ.
11 ವರ್ಷದ ನಿಶ್ಚಿತ್, ತೃಪ್ತಿ, ತಿಮ್ಮರಾಜು, ಉಷಾ, ಚೇತನ್, ಸೃಷ್ಠಿ ಹಾಗೂ ನಾಗರಾಜ್ ಗಾಯಗೊಂಡಿದ್ದು, ಇವರನ್ನು ಹಾಸನದ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತವಾಗುತ್ತಿದ್ದಂತೆ ಕಾರು ಚಾಲಕ ಸುಧಾಕರ್ ನನ್ನ ಹಿಡಿದು ಸ್ಥಳೀಯರು ಥಳಿಸಿದ್ದಾರೆ. ಅಪಘಾತದ ಬಳಿಕ ಕಾರಿನಲ್ಲಿದ್ದ ಮತ್ತೋರ್ವ ಪರಾರಿಯಾಗಿದ್ದಾನೆ.



ಕಾರು ಚಾಲಕನನ್ನ ಜಿಲ್ಲಾಸ್ಪತ್ರೆಗೆ ಸ್ಥಳೀಯರು ದಾಖಲಿಸಿದ್ದಾರೆ. ಕಾರಿನ ಗಾಜುಗಳನ್ನ ಪುಡಿ-ಪುಡಿ ಮಾಡಿ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ಮುಂಭಾಗ ಕೆಲ ಕಾಲ ಪ್ರಕ್ಷುಬ್ಧ ವಾತಾವರಣ ನೆಲೆಸಿತ್ತು.
ಸ್ಥಳದಲ್ಲಿ 50ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.
ಆಸ್ಪತ್ರೆ ಮುಂಭಾಗ ಆಕ್ರೋಶಿತರ ನೆರೆದು ಪೊಲೀಸರ ಮಾತು ಕೇಳದೆ ಇದ್ದಾಗ ಸ್ಥಳಕ್ಕೆ ಎಎಸ್ಪಿ ಜಯಕುಮಾರ್ ಭೇಟಿ ನೀಡಿದರು. ಎಎಸ್ಪಿ ಜಯಕುಮಾರ್ ಮುಂದೆ ಮಕ್ಕಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು