12:19 AM Wednesday17 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಹುಂಡಿ ಎಣಿಕೆ: ಒಂದೇ ತಿಂಗಳಲ್ಲಿ 2.11 ಕೋಟಿಗೂ ಅಧಿಕ ಆದಾಯ

16/04/2026, 18:50

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ರಾಜ್ಯದ ಪ್ರತಿಷ್ಠಿತ ದೇವಾಲಯಗಳಲ್ಲಿ ಒಂದಾದ ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಹುಂಡಿಗಳ ಎಣಿಕೆ ನಡೆದಿದ್ದು, ಒಂದು ತಿಂಗಳಲ್ಲಿ ಸುಮಾರು ಎರಡು ಕೋಟಿಗೂ ಹೆಚ್ಚು ದಾಖಲೆ ಮೊತ್ತದ ಆದಾಯ ಗಳಿಸಿದೆ.
ಶ್ರೀ ಶ್ರೀಕಂಠ ದೇವಾಲಯದ ಸುಮಾರು 37 ಹುಂಡಿಗಳಲ್ಲಿ ತುಂಬಿದ್ದ ಕಾಣಿಕೆ ಹಣ ತೆಗೆದು ಎಣಿಕೆ ಮಾಡಲಾಯಿತು.
ಈ ಬಾರಿಯ ದೇವಾಲಯದ ಪರ್ಕಾವಣೆ ಹಣವನ್ನು ಬ್ಯಾಂಕ್ ಆಫ್ ಬರೋಡ ನಂಜನಗೂಡು ಶಾಖೆಗೆ ವರ್ಗಾಯಿಸಿದ್ದ ಹಿನ್ನೆಲೆ ಬ್ಯಾಂಕ್ ಸಿಬ್ಬಂದಿಗಳು ಹಾಗೂ ಮಹಿಳಾ ಸ್ವಸಹಾಯ ಸಂಘಗಳ ನೂರಾರು ಮಹಿಳೆಯರು ಮತ್ತು ದೇವಾಲಯದ ಸಿಬ್ಬಂದಿಗಳು ಎಣಿಕೆಯಲ್ಲಿ ಭಾಗಿಯಾಗಿದ್ದರು.


ದೇವಾಲಯದ ದಾಸೋಹ ಭವನದಲ್ಲಿ ಆಯೋಜಿಸಲಾಗಿದ್ದ ಹುಂಡಿಗಳ ಎಣಿಕೆ ಕಾರ್ಯದಲ್ಲಿ ಎಲ್ಲಿ ನೋಡಿದರಲ್ಲಿ ಹಣದ ರಾಶಿ ಒಂದು ರೂ ನಿಂದ ಹಿಡಿದು 500 ರೂ ವರೆಗಿನ ಚಿಲ್ಲರೆ ನಾಣ್ಯವೂ ಸೇರಿದಂತೆ ರಾಶಿ ರಾಶಿ ನೋಟುಗಳ ಎಣಿಕೆ ಭರದಿಂದ ಸಾಗಿತ್ತು .
ಈ ಬಾರಿ ವರ್ಗಾವಣೆಯಲ್ಲಿ ಸುಮಾರು ಎರಡು ಕೋಟಿ 11 ಲಕ್ಷದ 48 ಸಾವಿರದ ಏಳುನೂರ ಇಪ್ಪತ್ತೆಂಟು ರೂಪಾಯಿಗಳ ದಾಖಲೆ ಮೊತ್ತದ ಜೊತೆಗೆ 58 ಗ್ರಾಂ ಚಿನ್ನ, ಎರಡು ಕೆಜಿ 500 ಗ್ರಾಂ ಬೆಳ್ಳಿ ಸೇರಿದಂತೆ 46 ವಿದೇಶಿ ಕರೆನ್ಸಿಗಳು, ನಿಷೇಧಿತ 500 ಮತ್ತು 2,000 ದ ಹಳೆಯ ನೋಟುಗಳು ಸಹ ಸಂಗ್ರಹವಾಗಿದ್ದದ್ದು ವಿಶೇಷವಾಗಿತ್ತು.
ಈ ಸಂದರ್ಭ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ, ಮುಜರಾಯಿ ಇಲಾಖೆಯ ತಹಸಿಲ್ದಾರ್ ಭಾಗ್ಯ, ಸಹಾಯಕ ಅಧಿಕಾರಿ ಸತೀಶ್, ಸೇರಿದಂತೆ ದೇವಾಲಯದ ಇನ್ನಿತರ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು