6:55 PM Thursday16 - April 2026
ಬ್ರೇಕಿಂಗ್ ನ್ಯೂಸ್
ಕೋಡಪದವಿನಲ್ಲಿ ಚಿನ್ನದ ಸರ ಕದ್ದ ಪ್ರಕರಣಕ್ಕೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಫೋಟೋದ ವ್ಯಕ್ತಿಗೂ… Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ… ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ

ಇತ್ತೀಚಿನ ಸುದ್ದಿ

ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಹುಂಡಿ ಎಣಿಕೆ: ಒಂದೇ ತಿಂಗಳಲ್ಲಿ 2.11 ಕೋಟಿಗೂ ಅಧಿಕ ಆದಾಯ

16/04/2026, 18:50

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ರಾಜ್ಯದ ಪ್ರತಿಷ್ಠಿತ ದೇವಾಲಯಗಳಲ್ಲಿ ಒಂದಾದ ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಹುಂಡಿಗಳ ಎಣಿಕೆ ನಡೆದಿದ್ದು, ಒಂದು ತಿಂಗಳಲ್ಲಿ ಸುಮಾರು ಎರಡು ಕೋಟಿಗೂ ಹೆಚ್ಚು ದಾಖಲೆ ಮೊತ್ತದ ಆದಾಯ ಗಳಿಸಿದೆ.
ಶ್ರೀ ಶ್ರೀಕಂಠ ದೇವಾಲಯದ ಸುಮಾರು 37 ಹುಂಡಿಗಳಲ್ಲಿ ತುಂಬಿದ್ದ ಕಾಣಿಕೆ ಹಣ ತೆಗೆದು ಎಣಿಕೆ ಮಾಡಲಾಯಿತು.
ಈ ಬಾರಿಯ ದೇವಾಲಯದ ಪರ್ಕಾವಣೆ ಹಣವನ್ನು ಬ್ಯಾಂಕ್ ಆಫ್ ಬರೋಡ ನಂಜನಗೂಡು ಶಾಖೆಗೆ ವರ್ಗಾಯಿಸಿದ್ದ ಹಿನ್ನೆಲೆ ಬ್ಯಾಂಕ್ ಸಿಬ್ಬಂದಿಗಳು ಹಾಗೂ ಮಹಿಳಾ ಸ್ವಸಹಾಯ ಸಂಘಗಳ ನೂರಾರು ಮಹಿಳೆಯರು ಮತ್ತು ದೇವಾಲಯದ ಸಿಬ್ಬಂದಿಗಳು ಎಣಿಕೆಯಲ್ಲಿ ಭಾಗಿಯಾಗಿದ್ದರು.


ದೇವಾಲಯದ ದಾಸೋಹ ಭವನದಲ್ಲಿ ಆಯೋಜಿಸಲಾಗಿದ್ದ ಹುಂಡಿಗಳ ಎಣಿಕೆ ಕಾರ್ಯದಲ್ಲಿ ಎಲ್ಲಿ ನೋಡಿದರಲ್ಲಿ ಹಣದ ರಾಶಿ ಒಂದು ರೂ ನಿಂದ ಹಿಡಿದು 500 ರೂ ವರೆಗಿನ ಚಿಲ್ಲರೆ ನಾಣ್ಯವೂ ಸೇರಿದಂತೆ ರಾಶಿ ರಾಶಿ ನೋಟುಗಳ ಎಣಿಕೆ ಭರದಿಂದ ಸಾಗಿತ್ತು .
ಈ ಬಾರಿ ವರ್ಗಾವಣೆಯಲ್ಲಿ ಸುಮಾರು ಎರಡು ಕೋಟಿ 11 ಲಕ್ಷದ 48 ಸಾವಿರದ ಏಳುನೂರ ಇಪ್ಪತ್ತೆಂಟು ರೂಪಾಯಿಗಳ ದಾಖಲೆ ಮೊತ್ತದ ಜೊತೆಗೆ 58 ಗ್ರಾಂ ಚಿನ್ನ, ಎರಡು ಕೆಜಿ 500 ಗ್ರಾಂ ಬೆಳ್ಳಿ ಸೇರಿದಂತೆ 46 ವಿದೇಶಿ ಕರೆನ್ಸಿಗಳು, ನಿಷೇಧಿತ 500 ಮತ್ತು 2,000 ದ ಹಳೆಯ ನೋಟುಗಳು ಸಹ ಸಂಗ್ರಹವಾಗಿದ್ದದ್ದು ವಿಶೇಷವಾಗಿತ್ತು.
ಈ ಸಂದರ್ಭ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ, ಮುಜರಾಯಿ ಇಲಾಖೆಯ ತಹಸಿಲ್ದಾರ್ ಭಾಗ್ಯ, ಸಹಾಯಕ ಅಧಿಕಾರಿ ಸತೀಶ್, ಸೇರಿದಂತೆ ದೇವಾಲಯದ ಇನ್ನಿತರ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು