2:10 PM Saturday18 - July 2026
ಬ್ರೇಕಿಂಗ್ ನ್ಯೂಸ್
ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ

ಇತ್ತೀಚಿನ ಸುದ್ದಿ

ತೀರ್ಥಹಳ್ಳಿ | ಒನ್ ವೇ ರಸ್ತೆಯಲ್ಲಿ ಬಂದ, ಪೊಲೀಸರು ಆಕ್ಷೇಪಿಸಿದಕ್ಕೆ ದೇವಸ್ಥಾನದಲ್ಲಿ ಹುಯ್ಲು ಕೊಡ್ತೀನಿ ಅಂದ!

17/04/2026, 20:53

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಪೊಲೀಸರ ಕೆಲಸಗಳು ಎಷ್ಟೊಂದು ಕಷ್ಟ ಎನ್ನುವುದಕ್ಕೆ ವಿಚಿತ್ರ ಪ್ರಸಂಗವೊಂದು ನಡೆದಿದ್ದು ಪೊಲೀಸರ ವಿರುದ್ಧದ ದೇವಸ್ಥಾನದಲ್ಲಿ ಹೊಯ್ಲು ಕೊಡಲು ಹೋದಂತಹ ವಿಚಿತ್ರ ಘಟನೆಗೆ ತೀರ್ಥಹಳ್ಳಿಯಲ್ಲಿ ನಡೆದಿದೆ.
ಗಾಂಧಿ ಚೌಕದಿಂದ ಮಾರಿಕಾಂಬಾ ದೇವಸ್ಥಾನದ ರಸ್ತೆ, ಒನ್ ವೇ ರಸ್ತೆಯಾಗಿದ್ದು ಈ ರಸ್ತೆಯಲ್ಲಿ ಬಂದಂತಹ ವ್ಯಕ್ತಿಯೊಬ್ಬನನ್ನ ಪೊಲೀಸರು ತಡೆದಿದ್ದಾರೆ. ಅಷ್ಟೇ ಅಲ್ಲದೆ ಆತ ಹೆಲ್ಮೆಟ್ ಸಹ ಹಾಕಿರಲಿಲ್ಲ. ಇದನ್ನು ಪ್ರಶ್ನೆ ಮಾಡಿದ ಪೊಲೀಸರಿಗೆ ಆತ ಹೇಳಿದಂತಹ ಮಾತು ನಿಜಕ್ಕೂ ಶಾಕ್ ಆಗಿದೆ. ಆತ ಏಕಾಏಕಿ ಮಾರಿಕಾಂಬ ದೇವಸ್ಥಾನದ ಮೆಟ್ಟಿಲನ್ನ ಹತ್ತಿ ನಾನು ದೇವಸ್ಥಾನದ ಕಾಣಿಕೆ ಹುಂಡಿಗೆ ಕಾಣಿಕೆ ಹಾಕಿ ನಿಮ್ಮ ಮೇಲೆ ಹುಯ್ಲು ಕೊಡ್ತೀನಿ ಎಂದು ಹೇಳಿದ್ದಾನೆ.
ಆ ವ್ಯಕ್ತಿಯ ಮಾತನ್ನು ಕೇಳಿದ ಪೊಲೀಸರು ಒಂದು ಕ್ಷಣಕ್ಕೆ ದಿಗ್ಭ್ರಮೆಗೊಂಡಿದ್ದಾರೆ. ಸಾರ್ವಜನಿಕರಿಗೆ ಒಳ್ಳೆಯದನ್ನು ಹೇಳಿದರು ಅರ್ಥ ಮಾಡಿಕೊಳ್ಳುವುದಿಲ್ಲ ಎಂಬುದಕ್ಕೆ ಇದೊಂದು ನಿದರ್ಶನ ಆಗಿದೆ..

ಇತ್ತೀಚಿನ ಸುದ್ದಿ

ಜಾಹೀರಾತು