1:54 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

17/04/2026, 21:00

ಬೆಂಗಳೂರು(reporterkarnataka.com): ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ. ಸಂಪುಟ ಪುನರ್ ರಚನೆ ಆಗಲಿ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಶಾಸಕರು ದೆಹಲಿಗೆ ಹೋಗಿರುವ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ. ಸಂಪುಟ ಪುನರ್ ರಚನೆ ಆಗಬೇಕು. ನಾನು ಹಿಂದೆ ಮಂತ್ರಿ ಆಗಿದ್ದಾಗ ಪುನರ್ ರಚನೆ ಆಗಿತ್ತು. ಬೇರೆಯವರಿಗೆ ಸಚಿವ ಸ್ಥಾನ ಸಿಗಬೇಕು. ಪಕ್ಷದ ಹಂತದಲ್ಲಿ ಅದು ಆಗುತ್ತದೆ ಎಂದರು. ಈ ಸಮಯದಲ್ಲಿ ಶಾಸಕರು ಹೋಗಿದ್ದು ಸರಿಯಲ್ಲ ಡಿಸಿಎಂ ಹೇಳಿಕೆ ಬಗ್ಗೆ ನಾನು ಮಾತಾಡಲ್ಲ.ಶಾಸಕರು ಅವರು ಪ್ರಯತ್ನ ಮಾಡೋದು ತಪ್ಪಲ್ಲ. ಮಂತ್ರಿ ಆಗೋಕೆ ಎಲ್ಲರಿಗೂ ಆಸೆ ಇರುತ್ತದೆ. ಯಾರು ಮಂತ್ರಿಯಾಗಿ ಇರಬೇಕು ಅಂತ ಹೈಕಮಾಂಡ್ ತೀರ್ಮಾನ ಮಾಡುತ್ತದೆ. 33 ಜನ ಯಾರು ಅಂತ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು. ಸಂಸತ್‌ನಲ್ಲಿ ಕ್ಷೇತ್ರ ಮರು ವಿಂಗಡಣೆ ವಿಧೇಯಕ ಮಂಡನೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯಗಳಲ್ಲಿ ಈಗ ಇರೋ ಲೋಕಸಭೆ ಕ್ಷೇತ್ರಗಳ ಪೈಕಿ 50% ಸೀಟು ಹೆಚ್ಚಳ ಮಾಡಿದ್ರೆ ಯಾವುದೇ ಅನ್ಯಾಯ ಆಗಲ್ಲ. ಮಹಿಳಾ ಮೀಸಲಾತಿ ಕೊಡಲು ಕ್ಷೇತ್ರ ಹೆಚ್ಚು ಮಾಡೋ ಅವಶ್ಯಕತೆ ಇಲ್ಲ. ಎಷ್ಟೇ ಸ್ಥಾನ ಇದ್ದರು 33% ಮೀಸಲು ಕೊಡಬೇಕು ಅಷ್ಟೇ. ಡಿಲಿಮಿಟೇಷನ್ ಬೇರೆ, ಮಹಿಳಾ ಮೀಸಲಾತಿ ಬೇರೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು