ಇತ್ತೀಚಿನ ಸುದ್ದಿ
ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು ತೆರಳಿದ್ದ ಯುವಕ ನೀರುಪಾಲು: ಮೃತದೇಹ ಪತ್ತೆ
19/04/2026, 13:20
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಸಿದ್ದರಾಮಯ್ಯ ಸೇತುವೆ ಕೆಳಭಾಗಕ್ಕೆ ಇಳಿದು ಸ್ನಾನಕ್ಕೆ ತೆರಳಿದ್ದ ಮೂವರು ಪೈಕಿ ಒಬ್ಬರು ನೀರು ಪಾಲಾದ ಘಟನೆ ನಡೆದಿದ್ದು, ಮೃತದೇಹ ಪತ್ತೆಯಾಗಿದೆ.
ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು ಇವರು ತೆರಳಿದ್ದರು. ಇಬ್ಬರು ಮೇಲೆ ಬಂದರೂ ಮತ್ತೋರ್ವ ಹೊರಬರಲಾರದೆ ನೀರಿನಲ್ಲಿ ಮುಳುಗಿದ್ದಾನೆ.
ಎನ್.ಆರ್.ಪುರದ ಸಿಗುವಾನಿ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ.

ಕಳೆದ ಭಾನುವಾರವಷ್ಟೆ ಸಿಎಂ ಸಿದ್ದರಾಮಯ್ಯ ಅವರು ಸೇತುವೆ ಉದ್ಘಾಟಿಸಿದ್ದರು.
ಸಿದ್ದರಾಮಯ್ಯ ಸೇತುವೆ ಬಳಿ ವ್ಯಕ್ತಿ ಮೃತದೇಹ ಪತ್ತೆಯಾಗಿದೆ.
ಅಗ್ನಿಶಾಮಕ ದಳ, ಪೊಲೀಸರು, ಸ್ಥಳೀಯರ ನೆರವಿನಿಂದ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದರು.
ಮೃತರನ್ನು ಎನ್.ಆರ್ ಪುರ ತಾಲೂಕಿನ ಸಿಗುವಾನಿ ನಿವಾಸಿ ನಿತಿನ್ (38) ಎಂದು ಗುರುತಿಸಲಾಗಿದೆ.














