4:50 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಹೊಸಪೇಟೆ ಸಮೀಪ ಭೀಕರ ಸರಣಿ ಅಪಘಾತ: 4 ಸಾವು; 25 ಮಂದಿ ಗಂಭೀರ ಗಾಯ

19/04/2026, 13:58

ವಿಜಯನಗರ(reporterkarnataka.com): ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಡಣಾಪುರದಲ್ಲಿ ನಿಯಂತ್ರಣ ತಪ್ಪಿದ ಲಾರಿಯೊಂದು ಕಾರು, ಸರ್ಕಾರಿ ಬಸ್ ಹಾಗೂ ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಸರಣಿ ಅಪಘಾತ ಸಂಭವಿಸಿದೆ.
ಈ ದುರ್ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಡಣಾಪುರದಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಲಾರಿಯೊಂದು ಕಾರ್, ಸರ್ಕಾರಿ ಬಸ್ ಮತ್ತು ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದಿದೆ.
ಬೆಳ್ಳುಳ್ಳಿ ತುಂಬಿಕೊಂಡು ಹರಿಯಾಣದಿಂದ ಬಂದ ಲಾರಿಯೊಂದು ನಿಯಂತ್ರಣ ತಪ್ಪಿ ಮೊದಲಿಗೆ ಕಾರ್‌ಗೆ ಡಿಕ್ಕಿ ಹೊಡೆದಿದೆ. ನಂತ್ರ ಸರ್ಕಾರಿ ಬಸ್ ಹಾಗೂ ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದಿದೆ. ಬಳಿಕ ಲಾರಿ ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಅಪಘಾತದ ತೀವ್ರತೆ ಹೆಚ್ಚಾಗಿದೆ.
ಹೊಸಪೇಟೆಯಿಂದ ಚಿತ್ರದುರ್ಗದತ್ತ ತೆರಳುತ್ತಿದ್ದ ಸರ್ಕಾರಿ ಬಸ್‌ಗೆ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಸುಮಾರು 25 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಈ ಅಪಘಾತ ಸಂಭವಿಸಿದ ಸ್ಥಳದಲ್ಲಿ ಹೆದ್ದಾರಿ ದುರಸ್ತಿ ಹಾಗೂ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಒಂದೇ ಬದಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಇದೇ ಕಾರಣದಿಂದ ಅಪಘಾತ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.
ಅಪಘಾತದ ಪರಿಣಾಮವಾಗಿ ಹೆದ್ದಾರಿಯಲ್ಲಿ ಎರಡೂ ಬದಿಗಳಲ್ಲಿ ಸುಮಾರು ಮೂರು ಕಿಲೋ ಮೀಟರ್‌ವರೆಗೆ ಸಂಚಾರ ದಟ್ಟಣೆ ಉಂಟಾಗಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಪೊಲೀಸರು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದು, ಟ್ರಾಫಿಕ್ ತಿಳಿಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು