8:48 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

Sad News: ಗಂಡು ಮಗುವಿಗೆ ಜನ್ಮ ನೀಡಿದ ಅವಿವಾಹಿತ ಯುವತಿ ಸಾವು; ಇಬ್ಬರು ಪ್ರೇಮಿಗಳಲ್ಲಿ ತಂದೆ ಯಾರು ಎನ್ನುವುದೇ ಪ್ರಶ್ನೆ !!

14/09/2021, 17:12

ಶಿವಮೊಗ್ಗ(reporterkarnataka.com): ಅವಿವಾಹಿತ ಯುವತಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿ, ತಾಯಿ- ಮಗು ಇಬ್ಬರೂ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಇಲ್ಲಿನ ವೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. 

ಯುವತಿ ಹೆರಿಗೆಯಾದ ಎರಡು ತಾಸಿನೊಳಗೆ ಕೊನೆಯುಸಿರೆಳೆದಿದ್ದಾಳೆ. ಜತೆಗೆ ಹಸುಗೂಸು ಕೂಡ ಸಾವನ್ನಪ್ಪಿದೆ. ಇದೀಗ ಅವಿವಾಹಿತ ಯುವತಿಯ ಮಗುವಿನ ತಂದೆ ಯಾರು? ಎಂಬ ಪ್ರಶ್ನೆ ಉದ್ಭವವಾಗಿದೆ. ಇದರ ಜತೆಗೆ ಒಂದಿಷ್ಟು ಪ್ರೇಮ ಕಹಾನಿ ಹೊರ ಬಿದ್ದಿದೆ.

ಶಿವಮೊಗ್ಗ ತಾಲೂಕು ಕುಂಸಿ ಗ್ರಾಮದ ಉಪ್ಪಾರ ಕೇರಿಯ ಅಶ್ವಿನಿ ಮೃತ ಯುವತಿ. ಈಕೆ ಆಯನೂರು ಸಮೀಪದ ಗ್ರಾಮದ ಮಧುಸೂದನ್ ಎಂಬಾತನನ್ನು ಪ್ರೀತಿಸುತ್ತಿದ್ದಳು.

ಉದ್ಯೋಗ ಅರಸಿ ಮೈಸೂರಿಗೆ ತೆರಳಿದ್ದ ಯುವತಿ ಅಲ್ಲಿ ಬಸವರಾಜ್ ಎಂಬಾತನೊಂದಿಗೆ ಪ್ರೀತಿ, ಪ್ರೇಮ ಶುರು ಮಾಡಿದ್ದಳು ಎನ್ನಲಾಗಿದೆ. ಇದೇ ವೇಳೆಗೆ ಕೊರೊನಾ ಲಾಕ್ ಡೌನ್ ಆಗಿದ್ದರಿಂದ ಸ್ವಗ್ರಾಮಕ್ಕೆ ಬರುವಾಗ ತನ್ನೊಂದಿಗೆ ಬಸವರಾಜನನ್ನೂ ಕರೆದು ಕೊಂಡು ಬಂದಿದ್ದಳು. ಬಸವರಾಜ್ ಬಗ್ಗೆ ಮನೆಯವರು ವಿಚಾರಿಸಿದಾಗ ಆತ ನನ್ನ ಸ್ನೇಹಿತ, ಲಾಕ್ ಡೌನ್ ಹಿನ್ನೆಲೆಯಲ್ಲಿ ನನ್ನೊಂದಿಗೆ ಬಂದಿದ್ದಾನೆ, ಕೆಲ ದಿನದಲ್ಲೇ ಮತ್ತೆ ಮೈಸೂರಿಗೆ ಹೋಗುತ್ತಾನೆ ಎಂದಿದ್ದಳು. ಆದರೆ, ಮನೆಯವರು ಬಸವರಾಜ್ ಬಗ್ಗೆ ಪದೇಪದೆ ಪ್ರಶ್ನೆ ಮಾಡಲಾರಂಭಿಸಿದಾಗ ಬಸವರಾಜ್ ವಾಪಸ್ ಮೈಸೂರಿಗೆ ತೆರಳಿದ್ದ. ಬಸವರಾಜ್ ಮೈಸೂರಿಗೆ ತೆರಳಿದ ಕೆಲ ದಿನಗಳ ಬಳಿಕ ಅಶ್ವಿನಿ ಆರೋಗ್ಯದಲ್ಲಿ ಏರುಪೇರಾಗಲಾರಂಭಿಸಿತ್ತು. ಒಂದು ದಿನ ವಿಪರೀತ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅಶ್ವಿನಿಯನ್ನು ಪಾಲಕರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ಆಕೆ ಗರ್ಭಿಣಿ ಎಂದು ಗೊತ್ತಾಗಿದೆ. ಅಂದೇ ಹೊಟ್ಟೆ ನೋವು ಹೆಚ್ಚಾಗಿ ಅವಧಿ ಪೂರ್ವ ಹೆರಿಗೆಯೂ ಆಗಿದೆ. ಮುಂದೆ ನಡೆದಿದ್ದು ದುರಂತ ಅಂತ್ಯ.

ಇತ್ತೀಚಿನ ಸುದ್ದಿ

ಜಾಹೀರಾತು