1:44 PM Thursday2 - July 2026
ಬ್ರೇಕಿಂಗ್ ನ್ಯೂಸ್
ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬಸ್ಥರಿಂದ ಭೂಕಬಳಿಕೆ ಆರೋಪ: ಮುಖ್ಯಮಂತ್ರಿ ಡಿಕೆಶಿ ಮುಂದೆ ಹಾಸನ… ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ…

ಇತ್ತೀಚಿನ ಸುದ್ದಿ

Sad News: ಗಂಡು ಮಗುವಿಗೆ ಜನ್ಮ ನೀಡಿದ ಅವಿವಾಹಿತ ಯುವತಿ ಸಾವು; ಇಬ್ಬರು ಪ್ರೇಮಿಗಳಲ್ಲಿ ತಂದೆ ಯಾರು ಎನ್ನುವುದೇ ಪ್ರಶ್ನೆ !!

14/09/2021, 17:12

ಶಿವಮೊಗ್ಗ(reporterkarnataka.com): ಅವಿವಾಹಿತ ಯುವತಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿ, ತಾಯಿ- ಮಗು ಇಬ್ಬರೂ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಇಲ್ಲಿನ ವೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. 

ಯುವತಿ ಹೆರಿಗೆಯಾದ ಎರಡು ತಾಸಿನೊಳಗೆ ಕೊನೆಯುಸಿರೆಳೆದಿದ್ದಾಳೆ. ಜತೆಗೆ ಹಸುಗೂಸು ಕೂಡ ಸಾವನ್ನಪ್ಪಿದೆ. ಇದೀಗ ಅವಿವಾಹಿತ ಯುವತಿಯ ಮಗುವಿನ ತಂದೆ ಯಾರು? ಎಂಬ ಪ್ರಶ್ನೆ ಉದ್ಭವವಾಗಿದೆ. ಇದರ ಜತೆಗೆ ಒಂದಿಷ್ಟು ಪ್ರೇಮ ಕಹಾನಿ ಹೊರ ಬಿದ್ದಿದೆ.

ಶಿವಮೊಗ್ಗ ತಾಲೂಕು ಕುಂಸಿ ಗ್ರಾಮದ ಉಪ್ಪಾರ ಕೇರಿಯ ಅಶ್ವಿನಿ ಮೃತ ಯುವತಿ. ಈಕೆ ಆಯನೂರು ಸಮೀಪದ ಗ್ರಾಮದ ಮಧುಸೂದನ್ ಎಂಬಾತನನ್ನು ಪ್ರೀತಿಸುತ್ತಿದ್ದಳು.

ಉದ್ಯೋಗ ಅರಸಿ ಮೈಸೂರಿಗೆ ತೆರಳಿದ್ದ ಯುವತಿ ಅಲ್ಲಿ ಬಸವರಾಜ್ ಎಂಬಾತನೊಂದಿಗೆ ಪ್ರೀತಿ, ಪ್ರೇಮ ಶುರು ಮಾಡಿದ್ದಳು ಎನ್ನಲಾಗಿದೆ. ಇದೇ ವೇಳೆಗೆ ಕೊರೊನಾ ಲಾಕ್ ಡೌನ್ ಆಗಿದ್ದರಿಂದ ಸ್ವಗ್ರಾಮಕ್ಕೆ ಬರುವಾಗ ತನ್ನೊಂದಿಗೆ ಬಸವರಾಜನನ್ನೂ ಕರೆದು ಕೊಂಡು ಬಂದಿದ್ದಳು. ಬಸವರಾಜ್ ಬಗ್ಗೆ ಮನೆಯವರು ವಿಚಾರಿಸಿದಾಗ ಆತ ನನ್ನ ಸ್ನೇಹಿತ, ಲಾಕ್ ಡೌನ್ ಹಿನ್ನೆಲೆಯಲ್ಲಿ ನನ್ನೊಂದಿಗೆ ಬಂದಿದ್ದಾನೆ, ಕೆಲ ದಿನದಲ್ಲೇ ಮತ್ತೆ ಮೈಸೂರಿಗೆ ಹೋಗುತ್ತಾನೆ ಎಂದಿದ್ದಳು. ಆದರೆ, ಮನೆಯವರು ಬಸವರಾಜ್ ಬಗ್ಗೆ ಪದೇಪದೆ ಪ್ರಶ್ನೆ ಮಾಡಲಾರಂಭಿಸಿದಾಗ ಬಸವರಾಜ್ ವಾಪಸ್ ಮೈಸೂರಿಗೆ ತೆರಳಿದ್ದ. ಬಸವರಾಜ್ ಮೈಸೂರಿಗೆ ತೆರಳಿದ ಕೆಲ ದಿನಗಳ ಬಳಿಕ ಅಶ್ವಿನಿ ಆರೋಗ್ಯದಲ್ಲಿ ಏರುಪೇರಾಗಲಾರಂಭಿಸಿತ್ತು. ಒಂದು ದಿನ ವಿಪರೀತ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅಶ್ವಿನಿಯನ್ನು ಪಾಲಕರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು. ಈ ವೇಳೆ ಆಕೆ ಗರ್ಭಿಣಿ ಎಂದು ಗೊತ್ತಾಗಿದೆ. ಅಂದೇ ಹೊಟ್ಟೆ ನೋವು ಹೆಚ್ಚಾಗಿ ಅವಧಿ ಪೂರ್ವ ಹೆರಿಗೆಯೂ ಆಗಿದೆ. ಮುಂದೆ ನಡೆದಿದ್ದು ದುರಂತ ಅಂತ್ಯ.

ಇತ್ತೀಚಿನ ಸುದ್ದಿ

ಜಾಹೀರಾತು