11:56 PM Sunday19 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಕಾರವಾರದ ಸಾಧ್ವಿಗೆ ಫೆಮಿನಾ ಮಿಸ್ ಇಂಡಿಯಾ ಕಿರೀಟ: ಒಡಿಶಾದ ಭುವನೇಶ್ವರದಲ್ಲಿ ನಡೆದ ಸ್ಪರ್ಧೆ

19/04/2026, 23:14

ಭುವನೇಶ್ವರ(reporterkarnataka.com): ಒಡಿಶಾದ ಭುವನೇಶ್ವರದಲ್ಲಿ ಕಳೆದ ರಾತ್ರಿ ನಡೆದ 61ನೇ ಆವೃತ್ತಿಯ ಪ್ರತಿಷ್ಠಿತ ‘ಫೆಮಿನಾ ಮಿಸ್ ಇಂಡಿಯಾ’ ಸೌಂದರ್ಯ ಸ್ಪರ್ಧೆಯಲ್ಲಿ ಕಾರವಾರದ ಸಾಧ್ವಿ ಅವರು ವಿಜೇತರಾಗಿ ಹೊರಹೊಮ್ಮಿದ್ದಾರೆ.
ದೇಶದ ವಿವಿಧ ಭಾಗಗಳಿಂದ ಬಂದಿದ್ದ ಸ್ಪರ್ಧಿಗಳನ್ನು ಹಿಂದಿಕ್ಕಿ ಸಾಧ್ವಿ ಅವರು ‘ಮಿಸ್ ಇಂಡಿಯಾ ವರ್ಲ್ಡ್ 2026’ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಉದ್ಯಮಿಯಾಗಿ, ಮಾಡೆಲ್ ಆಗಿ ಸಾಧ್ವಿ ಪಯಣ ಸೌಂದರ್ಯದ ಜೊತೆಗೆ ಉದ್ಯಮ ರಂಗದಲ್ಲೂ ಗುರುತಿಸಿಕೊಂಡಿರುವ ಕಾರವಾರ ಶಾಸಕ ಸತೀಶ್ ಪುತ್ರಿ ಸಾಧ್ವಿ ಸೈಲ್ ಅವರ ಸಾಧನೆ ನಿಜಕ್ಕೂ ಅದ್ಭುತ. ಸೌಂದರ್ಯ ಲೋಕಕ್ಕೆ ಕಾಲಿಡುವ ಮುನ್ನವೇ ಸಾಧ್ವಿ ಅವರು ನಿರ್ಮಾಣ ಮತ್ತು ಅಭಿವೃದ್ಧಿ ಕ್ಷೇತ್ರದಲ್ಲಿ ಕಂಪನಿಯೊಂದನ್ನು ಸ್ಥಾಪಿಸಿ ಯಶಸ್ವಿ ಉದ್ಯಮಿಯಾಗಿ ಗುರುತಿಸಿಕೊಂಡಿದ್ದಾರೆ. ಈಗಾಗಲೇ ‘ಕ್ಯಾಲಿಫೋರ್ನಿಯಾ ಬುರ್ರಿಟೋ’ ಅಂತಹ ಹಲವು ಪ್ರತಿಷ್ಠಿತ ಬ್ರ್ಯಾಂಡ್‌ಗಳ ಜಾಹೀರಾತುಗಳಲ್ಲಿ ಇವರು ಮಿಂಚಿದ್ದಾರೆ.


ಸೋಲಿಗೆ ಹೆದರದ ಸಂಕಲ್ಪ ಕಿರೀಟ ಧರಿಸಿದ ನಂತರ ಮಾತನಾಡಿದ ಸಾಧ್ವಿ, ಈ ಕ್ಷಣವನ್ನು “ಅವಿಸ್ಮರಣೀಯ” ಎಂದು ಬಣ್ಣಿಸಿದರು. “ಇದು ಕೇವಲ ಆರಂಭವಷ್ಟೇ, ಮುಂದೆ ಸುದೀರ್ಘ ಪಯಣ ಬಾಕಿಯಿದೆ. ವೇದಿಕೆಯ ಮೇಲಿದ್ದ ಎಲ್ಲಾ ಸ್ಪರ್ಧಿಗಳೂ ವಿಜೇತರೇ. ನಮ್ಮ ನಡುವಿನ ಸ್ನೇಹ ಮತ್ತು ಪರಸ್ಪರ ಕಲಿಕೆ ಈ ಪ್ರಯಾಣದ ಅತ್ಯುತ್ತಮ ಭಾಗ” ಎಂದು ಅವರು ಭಾವನಾತ್ಮಕವಾಗಿ ನುಡಿದರು.
ವಿಶ್ವ ಸುಂದರಿ ವೇದಿಕೆಗೆ ಸಜ್ಜು ಮಹಾರಾಷ್ಟ್ರದ ರಾಜನಂದಿನಿ ಪವಾರ್ ಅವರು ಮೊದಲ ರನ್ನರ್ ಅಪ್ ಸ್ಥಾನ ಗಳಿಸಿ ಕಠಿಣ ಪೈಪೋಟಿ ನೀಡಿದರು. ಕಳೆದ ಬಾರಿಯ ವಿಜೇತೆ ನಿಖಿತಾ ಪೋರ್ವಾಲ್ ಅವರು ಸಾಧ್ವಿ ಅವರಿಗೆ ಕಿರೀಟ ತೊಡಿಸಿ ಶುಭ ಹಾರೈಸಿದರು.
ಮಹಾರಾಷ್ಟ್ರದ ರಾಜನಂದಿನಿ ಪವಾರ್ ಮೊದಲ ರನ್ನರ್ ಅಪ್ ಆಗಿ ಮತ್ತು ಜಮ್ಮು ಕಾಶ್ಮೀರದ ಡಾ. ಶ್ರೀ ಅದ್ವೈತ ಎರಡನೇ ರನ್ನರ್ ಅಪ್ ಆಗಿ ಆಯ್ಕೆಯಾದರು.
ಮಿಸ್ ಇಂಡಿಯಾ ವರ್ಲ್ಡ್ ಪಟ್ಟ ಗೆದ್ದಿರುವ ಸಾಧ್ವಿ ಅವರು 2027 ರಲ್ಲಿ ನಡೆಯಲಿರುವ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು