ಇತ್ತೀಚಿನ ಸುದ್ದಿ
ಗಂಜಿಮಠ | ಓಡ್ಡೂರು ಫಾರ್ಮ್ಸ್ ನಲ್ಲಿ ಪಂಡಿತ್ ದೀನ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾ ಅಭಿಯಾನ ಉದ್ಘಾಟನೆ
20/04/2026, 14:09
ಮಂಗಳೂರು(reporterkarnataka.com): ಭಾರತೀಯ ಜನತಾ ಪಾರ್ಟಿಯ ಮಂಗಳೂರು ಉತ್ತರ ಮಂಡಲದ 2026ರ ಪಂಡಿತ್ ದೀನ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾ ಅಭಿಯಾನದ ಉದ್ಘಾಟನೆ ಗಂಜಿಮಠ ಸಮೀಪದ ಓಡ್ಡೂರು ಫಾರ್ಮ್ಸ್ ನಲ್ಲಿ ನಡೆಯಿತು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮತ್ತು ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾ|ಬ್ರಿಜೇಶ್ ಚೌಟ ಜಂಟಿಯಾಗಿ ದೀಪ ಬೆಳಗಿಸಿ, ಭಾರತ ಮಾತೆ ಮತ್ತು ಪಕ್ಷದ ಸಂಸ್ಥಾಪಕರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ನಡೆಸುವ ಮೂಲಕ ಪ್ರಶಿಕ್ಷಣ ಅಭಿಯಾನವನ್ನು ಉದ್ಘಾಟಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ,ಮಂಗಳೂರು ನಗರ ಉತ್ತರ ಶಾಸಕ ಡಾ. ಭರತ್ ಶೆಟ್ಟಿ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಶಿವಮೊಗ್ಗ ಶಾಸಕ ಚೆನ್ನಬಸಪ್ಪ, ಪಕ್ಷದ ರಾಜ್ಯ ವಕ್ತಾರ ಹರಿಪ್ರಕಾಶ್ ಕೋಣಿಮನಿ, ಪ್ರಶಿಕ್ಷಣ ವರ್ಗುದ ರಾಜ್ಯ ಸಹ ಸಂಚಾಲಕ ವಿಕಾಸ್ ಪುತ್ತೂರು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರುಗಳಾದ ಶಾಂತಿಪ್ರಸಾದ್ ಹೆಗ್ಡೆ, ತಿಲಕ್ ರಾಜ್ ಕೃಷ್ಣಾಪುರ,ಪೂಜಾ ಪೈ, ಕವಿತಾ ಸನಿಲ್,ಪ್ರಧಾನ ಕಾರ್ಯದರ್ಶಿಗಳಾದ ಯುತೀಶ್ ಆಳ್ವ, ಪ್ರೇಮಾನಂದ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಶ್ವೇತಾ ಪೂಜಾರಿ, ಮನ್ ಕೀ ಬಾತ್ ಜಿಲ್ಲಾ ಪ್ರಮುಖ್ ಸೀತಾರಾಮ ನಾಯ್ಕ್, ಮಂಡಲ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ ಉಪಸ್ಥಿತರಿದ್ದರು.
ಕಾರ್ಪೂರೇಟರ್ ಸಂಗೀತ ನಾಯಕ್, ರಣದೀಪ್ ಕಾಂಚನ್ ಮತ್ತಿತರರು ಇದ್ದರು.














