7:12 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಭಾರೀ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಪೆಡ್ಲರ್ ಗಳ ಬಂಧನ; 46.50 ಲಕ್ಷ ಮೌಲ್ಯದ ಡ್ರಗ್ಸ್ ವಶ

20/04/2026, 22:59

ಮಂಗಳೂರು(reporterkarnataka.com): ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.
ನಗರ ಜೆಪ್ಪಿನಮೊಗರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ದೊಡ್ಡ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಬರುತ್ತಿರುವುದಾಗಿ ಕಂಕನಾಡಿ ನಗರ ಪೊಲೀಸರಿಗೆ ಬಂದ ಖಚಿತ ಮಾಹಿತಿಯಂತೆ ಬಜಾಜ್ ಫ್ರೀಡಂ ಬೈಕ್ ನಲ್ಲಿ MDMA ಅನ್ನು ಇಟ್ಟುಕೊಂಡು ಬರುತ್ತಿದ್ದ ಆರೋಪಿಗಳಾದ ಪಿಲಾರು ಹೊಸಗದ್ದೆ ಮನೆ ನಿವಾಸಿ ಪರ್ವೇಜ್ ಅಲಿಯಾಸ್ ದಾವೂದ್ ಪರ್ವೇಜ್ ಹಾಗೂ ಪಿಲಾರು ಪೆರ್ಮಾನ್ನೂರು ನಿವಾಸಿ ನಜರತ್ ಅಲಿ ಎಂಬವರನ್ನು ವಶಕ್ಕೆ ಪಡೆದು ಅವರು ಹೊಂದಿದ್ದ 46,50,000/-ಮೌಲ್ಯದ 465.8 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತುವನ್ನು ಕಂಕನಾಡಿ ನಗರ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿ ಫರ್ವೇಜ್ ಎಂಬಾತನು ಮಂಗಳೂರಿನ ಯುವ ಸಮುದಾಯ ಮತ್ತು ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಜಿಲ್ಲೆಯ ಹೊರಗಿನಿಂದ ಬೃಹತ್ ಪ್ರಮಾಣದಲ್ಲಿ ಎಂಡಿಎಂಎ ತಂದು ಮಂಗಳೂರು ನಗರದಲ್ಲಿ ಮಾರಾಟ ಮತ್ತು ಸರಬರಾಜು ಮಾಡಲು ಪ್ರಯತ್ನಿಸುತ್ತಿರುವುದು ತನಿಖೆಯಲ್ಲಿ ತಿಳಿದು ಬಂದಿದೆ.
ಆರೋಪಿ ಫರ್ವೇಜ್ ಎಂಬಾತನ ವಿರುದ್ದ ಈಗಾಗಲೇ ಪಾಂಡೇಶ್ವರ, ವಾಮಂಜೂರು, ಬಂದರು ಪೊಲೀಸ್ ಠಾಣೆ, ಬೆಂಗಳೂರಿನ ಅಮೃತಹಳ್ಳಿ, ಮತ್ತು ಉಡುಪಿ ಸೆನ್ ಪೊಲೀಸ್ ಠಾಣೆಗಳಲ್ಲಿ ಮಾದಕ ವಸ್ತು ಮಾರಾಟ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದ್ದು, ಈತನು ರೂಢಿಗತ ಡ್ರಗ್ ಪೆಡ್ಲರ್ ಆಗಿರುತ್ತಾನೆ. ಈತನ ಸ್ನೇಹಿತ ನಜರತ್ ಅಲಿ ಈತನೊಂದಿಗೆ ಡ್ರಗ್ ಪೆಡ್ಲಿಂಗ್ ವ್ಯವಹಾರಕ್ಕೆ ಸಹಕರಿಸುತ್ತಾ ಈ ಕೃತ್ಯದಲ್ಲಿ ತೊಡಗಿಸಿಕೊಂಡಿರುತ್ತಾನೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು