4:49 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಮಂಗಳೂರು ಪೊಲೀಸ್ ಕಮಿಷನರ್‌ ಸುಧೀರ್‌ ಕುಮಾರ್‌ ರೆಡ್ಡಿ ವಿರುದ್ಧ ಡಿಸಿಆರ್‌ಇ ಎಸ್ಪಿ ದೂರು

21/04/2026, 14:14

ಮಂಗಳೂರು (reporterkarnataka.com): ಮಂಗಳೂರು ನಗರ ಪೊಲೀಸ್‌ ಆಯುಕ್ತ ಸುಧೀರ್‌ ಕುಮಾರ್‌ ರೆಡ್ಡಿ ಹಾಗೂ ಕೆಲ ಐಪಿಎಸ್‌ ಅಧಿಕಾರಿಗಳು ತಮ್ಮ ಕೆಳ ಹಂತದ ಅಧಿಕಾರಿ-ಸಿಬ್ಬಂದಿ ವಿರುದ್ಧ ದೌರ್ಜನ್ಯ ಎಸಗುತ್ತಿದ್ದು, ಇದನ್ನು ಬಹಿರಂಗಪಡಿಸಲು ಅನುಮತಿ ನೀಡುವಂತೆ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (ಡಿಸಿಆರ್‌ಇ) ಬೆಂಗಳೂರು ನಗರ ವಲಯದ ಎಸ್ಪಿ ಎಸ್‌.ಎಸ್‌.ಕಾಶಿ ರಾಜ್ಯ ಪೊಲೀಸ್‌ ಮಹಾನಿರ್ದೇರ್ಶಕರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಕೆಲವು ಐಪಿಎಸ್‌ ಅಧಿಕಾರಿಗಳು ಕೆಳಹಂತದ ಅಧಿಕಾರಿಗಳು, ಸಿಬ್ಬಂದಿ ಮೇಲೆ ದರ್ಪ, ತಾರತಮ್ಯ ತೋರುತ್ತಿದ್ದಾರೆ. ಬೇರೆ ರಾಜ್ಯಗಳಿಂದ ಬಂದವರು ಕನ್ನಡಿಗ ಅಧಿಕಾರಿಗಳನ್ನು ಹತ್ತಿಕ್ಕಲು ಯತ್ನಿಸುತ್ತಿದ್ದಾರೆಂದು ದೂರಿನಲ್ಲಿ ಆರೋಪಿಸಿದ್ದಾರೆ.
ಸುಧೀರ್ ಕುಮಾರ್ ರೆಡ್ಡಿ ಅವರ ಕರ್ಮಕಾಂಡ, ದೌರ್ಜನ್ಯ, ಇತರೆ ಕೆಲ ಐಪಿಎಸ್‌ ಅಧಿಕಾರಿಗಳ ಕರ್ಮಕಾಂಡ ತೆರೆದಿಡುತ್ತೇನೆ. ಹೀಗಾಗಿ ಮುಖ್ಯಮಂತ್ರಿ, ಗೃಹ ಸಚಿವರು, ಗೃಹ ಇಲಾಖೆ ಕಾರ್ಯದರ್ಶಿ ಮತ್ತು ತಮ್ಮ ಸಮಕ್ಷಮದಲ್ಲಿ ನನಗೆ ಏ.18ರಿಂದ ಏ.29ರೊಳಗೆ ದಿನಾಂಕ ನಿಗದಿ ಮಾಡಿ, 30 ನಿಮಿಷ ಕಾಲಾವಕಾಶ ಕೊಡಿಸುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ಇದೇ ತಿಂಗಳ ಅಂತ್ಯದಲ್ಲಿ ಕಾಶಿ ಅವರು ನಿವೃತ್ತಿ ಹೊಂದುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು