ಇತ್ತೀಚಿನ ಸುದ್ದಿ
ಇನ್ನು ಕೇವಲ 24 ತಾಸಿನಲ್ಲಿ ಭೂ ಪರಿವರ್ತನೆ: ಕಂದಾಯ ಸಚಿವ ಆರ್. ಅಶೋಕ್ ಏನು ಹೇಳಿದ್ರು ಗೊತ್ತಾ?
14/09/2021, 19:52

ಬೆಂಗಳೂರು(reporterkarnataka.com): ಇನ್ನು ಕೇವಲ 24 ತಾಸಿನಲ್ಲಿ ಭೂ ಪರಿವರ್ತನೆ ನಡೆಯಲಿದೆ. ರಿಯಲ್ ಎಸ್ಟೇಟ್ ಉದ್ಯಮಕ್ಕೆ ಉತ್ತೇಜನ ಹಾಗೂ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಕೃಷಿ ಭೂಮಿ ಪರಿವರ್ತನೆಗೆ ಸಂಬಂಧಿಸಿದಂತೆ ಹಲವು ಸಮಸ್ಯೆಗಳು ಕೇಳಿ ಬರುತ್ತಿವೆ. ಅದಕ್ಕಾಗಿ ರಾಜ್ಯದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಉತ್ತೇಜನ ಹಾಗೂ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ನಿಯಮಗಳನ್ನು ಸರಳಗೊಳಿಸಿ, ಕೇವಲ 24 ಗಂಟೆಯಲ್ಲೇ ಭೂ ಪರಿವರ್ತನೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಈ ನಿಟ್ಟಿನಲ್ಲಿ ರೂಪಿಸಲಾದ ನಿಯಮಾವಳಿಗಳಿಂದ ಪ್ರಕ್ರಿಯೆಗಳು ಸರಳವಾಗಲಿವೆ. ಈ ಬಗ್ಗೆ ವಿವಿಧ ಇಲಾಖೆಗಳ ಅಧಿಕಾರಿಗಳ ಜತೆಗೆ ಸಭೆ ನಡೆಸಿ ನಿರ್ಧಾರಿಸಲಾಗವುದು ಎಂದು ಅವರು ಹೇಳಿದ್ದಾರೆ.
ಹೊಸ ನಿಯಮಾವಳಿಯಂತೆ ಕಂದಾಯ ಇಲಾಖೆಯು ಭೂ ಪರಿವರ್ತನೆಗೆ ಅರ್ಜಿಯನ್ನು ಉಪ ಆಯುಕ್ತರಿಂದ ಯೋಜನಾ ಪ್ರಾಧಿಕಾರಕ್ಕೆ ಸಲ್ಲಿಸುತ್ತದೆ. ನಂತರ ಕಡತ ಎಲ್ಲಾ ಭೂ ಸ್ವಾಧೀನ ಅಧಿಕಾರಿಗಳಿಗೆ, ತಹಶೀಲ್ದಾರರು, ಕಂದಾಯ ನಿರೀಕ್ಷಕರು, ಕೊನೆಯಲ್ಲಿ ಗ್ರಾಮ ಲೆಕ್ಕಿಗರಿಗೆ ತಲುಪಲಿದೆ ಎಂದರು.