9:27 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

Kodagu | ನದಿ, ಹಿನ್ನೀರಿನಲ್ಲಿ ಈಜಲು ಇಳಿಯದಿರಲು ಕುಶಾಲನಗರ ಅಗ್ನಿಶಾಮಕ ಠಾಣೆ ಸೂಚನೆ

21/04/2026, 18:22

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರ ತಾಲೂಕು ಮೂಲತಃ ಕಾವೇರಿ ನದಿಯ ಸಮೀಪವಿರುವುದರಿಂದ ತಾಲೂಕಿನ ಸುತ್ತಲೂ ನದಿ ಹರಿಯುವಿಕೆಯ ಪ್ರಮಾಣ ಹೆಚ್ಚಾಗಿರುವುದರಿಂದ ಈ ಬೇಸಿಗೆಯಲ್ಲಿ ಶಾಲಾ ಮಕ್ಕಳು ಹಾಗೂ ಕಾಲೇಜು ವಿದ್ಯಾರ್ಥಿಗಳು ಮತ್ತು ಸ್ಥಳೀಯರು ನದಿಯಲ್ಲಿ ಈಜುಲು ತೆರಳುವುದರಿಂದ ನದಿಯಲ್ಲಿ ಮುಳುಗಿ ಮೃತಪಡುತ್ತಿರುವುದು ನಿಜಕ್ಕೂ ದೌರ್ಭಾಗ್ಯ. ಆದರೆ ಶಾಲೆ ಮತ್ತು ಕಾಲೇಜುಗಳಿಗೆ ರಜೆ ಇರುವುದರಿಂದ ಹೆಚ್ಚಿನ ವಿದ್ಯಾರ್ಥಿಗಳು ಕಾವೇರಿ ನದಿಯಲ್ಲಿ ಹಾಗೂ ಹಿನ್ನೀರಿನಲ್ಲಿ ಈಜಲು ತೆರಳಬೇಡಿ, ನದಿಯ ಆಳ ಮತ್ತು ನದಿ ಹರಿಯುವಿಕೆ ಪ್ರಮಾಣ ನಿಮಗೆ ತಿಳಿದಿರುವುದಿಲ್ಲ. ಸಾಮಾನ್ಯವಾಗಿ ನೀರಿನಲ್ಲಿ ಈಜುತ್ತಿದ್ದಾಗ ಆಳ ಪ್ರದೇಶಕ್ಕೆ ಜಾರುವುದರಿಂದ ಭಯ ಉಂಟಾಗಿ ಮತ್ತು ಉಸಿರಾಟದ ಸಮಸ್ಯೆಯಿಂದ ಹಾಗೂ ಮುಂದೆ ಏನು ಮಾಡಬೇಕೆಂದು ತಿಳಿಯದೆ ಉಸಿರು ಚೆಲ್ಲುತ್ತಿದ್ದಾರೆ. ಹಾಗಾಗಿ ಯಾವುದೇ ವಿದ್ಯಾರ್ಥಿಗಳು, ಯುವಕರು ಹಾಗೂ ಸ್ಥಳೀಯರು ನೀರಿನಲ್ಲಿ ಇಳಿಯಬಾರದಾಗಿ ಅಗ್ನಿಶಾಮಕ ಠಾಣೆ ಕುಶಾಲನಗರ ಇವರ ವತಿಯಿಂದ ತಮ್ಮಲ್ಲಿ ಕೋರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು