2:01 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಶಿವಮೊಗ್ಗದಲ್ಲಿ ಭಯೋತ್ಪಾದನಾ ಕೃತ್ಯಕ್ಕೆ ಸಂಚು: ಮತ್ತೊಬ್ಬ ಆರೋಪಿಗೆ 6 ವರ್ಷ ಸಜೆ

22/04/2026, 11:12

ಶಿವಮೊಗ್ಗ(reporterkarnataka.com): ಶಿವಮೊಗ್ಗ ಜಿಲ್ಲೆಯ ತುಂಗಾ ತೀರದಲ್ಲಿ ನಡೆದಿದ್ದ ಭೀಕರ ಸ್ಫೋಟದ ತಾಲೀಮು (ಟ್ರಯಲ್ ಬ್ಲಾಸ್ಟ್) ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ವಿಶೇಷ (NIA) ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ.
ಪ್ರಕರಣದ ಮೂರನೇ ಅಪರಾಧಿ ಅರಾಫತ್ ಅಲಿಗೆ ನ್ಯಾಯಾಲಯವು 6 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಶಿವಮೊಗ್ಗದ ಟ್ರಯಲ್ ಬ್ಲಾಸ್ಟ್ ಪ್ರಕರಣವು ರಾಜ್ಯಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಈ ಪ್ರಕರಣದ ತನಿಖೆ ನಡೆಸಿದ್ದ ರಾಷ್ಟ್ರೀಯ ತನಿಖಾ ದಳ (NIA), ಅರಾಫತ್ ಅಲಿ ವಿರುದ್ಧ ಗಂಭೀರ ಸಾಕ್ಷ್ಯಾಧಾರಗಳನ್ನು ಕಲೆಹಾಕಿತ್ತು. ನಿಷೇಧಿತ ಐಸಿಸ್ ಉಗ್ರ ಸಂಘಟನೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಅರಾಫತ್, ದೇಶವಿರೋಧಿ ಕೃತ್ಯಗಳನ್ನು ಎಸಗಲು ಸಂಚು ರೂಪಿಸಿದ್ದನು.
ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸಿನ ನೆರವು ನೀಡುವುದು ಮಾತ್ರವಲ್ಲದೆ, ಸ್ಥಳೀಯ ಯುವಕರನ್ನು ದಾರಿ ತಪ್ಪಿಸಿ ಸಂಘಟನೆಯತ್ತ ಸೆಳೆಯುತ್ತಿದ್ದ ಗಂಭೀರ ಆರೋಪ ಈತನ ಮೇಲಿತ್ತು. ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ಅರಾಫತ್ ಅಲಿ ಮೇಲಿನ ದೋಷಾರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಈ ಶಿಕ್ಷೆ ಪ್ರಕಟಿಸಿದ್ದಾರೆ.
ಈ ಭಯೋತ್ಪಾದಕ ಸಂಚಿಗೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಒಟ್ಟು 12 ಮಂದಿಯನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ಈ ಪೈಕಿ ಈಗಾಗಲೇ ಇಬ್ಬರು ಆರೋಪಿಗಳಿಗೆ ತಲಾ ಆರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಇದೀಗ ಅರಾಫತ್ ಅಲಿ ಶಿಕ್ಷೆಗೊಳಗಾದ ಮೂರನೇ ವ್ಯಕ್ತಿಯಾಗಿದ್ದಾನೆ.
ಉಳಿದ 9 ಮಂದಿ ಆರೋಪಿಗಳ ವಿರುದ್ಧದ ವಿಚಾರಣೆಯು ನ್ಯಾಯಾಲಯದಲ್ಲಿ ಪ್ರಗತಿಯಲ್ಲಿದ್ದು, ಪ್ರಕರಣದ ಅಂತಿಮ ಹಂತದ ಕಾನೂನು ಪ್ರಕ್ರಿಯೆಗಳು ಮುಂದುವರಿದಿವೆ. ದೇಶದ ಭದ್ರತೆಗೆ ಧಕ್ಕೆ ತರುವ ಇಂತಹ ಕೃತ್ಯಗಳಲ್ಲಿ ತೊಡಗುವವರಿಗೆ ಈ ತೀರ್ಪು ಒಂದು ಎಚ್ಚರಿಕೆಯ ಸಂದೇಶವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು