5:18 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು…

ಇತ್ತೀಚಿನ ಸುದ್ದಿ

ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು

23/04/2026, 17:14

ಮಡಿಕೇರಿ(reporterkarnataka.com): ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎನ್ನಲಾದ ಆರೋಪದ ಮೇಲೆ ಪೊನ್ನoಪೇಟೆ ತಾಲ್ಲೂಕಿನ ಶ್ರೀಮಂಗಲ ಹೋಬಳಿಯ ಕುಟ್ಟ ಗ್ರಾಮದ ದೇವಿ ವಿಲ್ಲಾ ಹೋಂ ಸ್ಟೇ ಮಾಲೀಕ ಸೇರಿದಂತೆ ಇಬ್ಬರು ಬಂಧನಕ್ಕೆ ಒಳಗಾಗಿರುವ ಹಿನ್ನಲೆಯಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ಹೋಂ ಸ್ಟೇ ನಡೆಸಲು ನೀಡಲಾಗಿದ್ದ ಪರವಾನಗಿಯನ್ನು ರದ್ದು ಪಡಿಸಿ ಆದೇಶ ಹೊರಡಿಸಿದ್ದಾರೆ.
ಕುಟ್ಟ ಗ್ರಾಮದ ಪಿ.ಎ. ಪೊನ್ನಪ್ಪ ಎಂಬುವರಿಗೆ ದೇವಿ ವಿಲ್ಲಾ ಹೋಂ ಸ್ಟೇ ನಡೆಸಲು 2024 ರ ಜನವರಿ 15ರಂದು ಪ್ರವಾಸೋದ್ಯಮ ಇಲಾಖೆಯಿಂದ ಪರವಾನಗಿ ನೀಡಲಾಗಿದೆ. ಇದೇ ತಿಂಗಳು 12 ರಂದು ಹೋಂ ಸ್ಟೇ ನಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದರಿಂದ ಕುಟ್ಟ ಪೊಲೀಸರು ಸ್ಟೇ ಮಾಲೀಕ ಹಾಗೂ ನೌಕರನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೋಂ ಸ್ಟೇ ಪರವಾನಗಿ ರದ್ದು ಗೊಳಿಸುವಂತೆ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಗೆ ಶಿಫಾರಸ್ಸು ಮಾಡಿದ್ದು, ಈ ಹಿನ್ನಲೆಯಲ್ಲಿ ಸಮಿತಿ ಅಧ್ಯರಾಗಿರುವ ಜಿಲ್ಲಾಧಿಕಾರಿ ಸೋಮಶೇಖರ್ ಅವರು ಪರವಾನಗಿ ರದ್ದು ಮಾಡಿ ಆದೇಶ ಹೊರಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು