7:46 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಶಿಕ್ಷಣದಲ್ಲಿ ನಿಮ್ಮ ಜಿಲ್ಲೆ ಸಾಧನೆ ಏನು: ಸಚಿವ ಪ್ರಿಯಾಂಕ್ ಖರ್ಗೆ ಕಾಲೆಳೆದ ಶಾಸಕ ಡಾ. ಭರತ್ ಶೆಟ್ಟಿ

23/04/2026, 23:14

ಮಂಗಳೂರು(reporterkarnataka.com): ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಕಲ್ಬುರ್ಗಿ ಜಿಲ್ಲೆಗಳ ಸಾಧನೆ ಕುರಿತು
ಶಾಸಕರಾದ ಡಾ. ಭರತ್ ಶೆಟ್ಟಿ ಅವರು ಸಚಿವ ಪ್ರಿಯಾಂಕ್ ಖರ್ಗೆ ಕಾಲೆಳೆದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯನ್ನು ಸದಾ ಟೀಕಿಸುತ್ತಿರುವ ಪ್ರಿಯಾಂಕ ಖರ್ಗೆ ಇನ್ನಾದರೂ ತಮ್ಮ ಜಿಲ್ಲೆಯಲ್ಲಿ ಉಳಿದುಕೊಂಡು ಶಿಕ್ಷಣ ಕ್ಷೇತ್ರವನ್ನು ಮೇಲಕ್ಕೆತ್ತಲು ಶ್ರಮವಹಿಸಬೇಕು ಎಂದು ಭರತ್ ಶೆಟ್ಟಿ ಸಲಹೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದಿದ್ದರೆ, ಕಲ್ಬುರ್ಗಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ ಎಂಬುದನ್ನು ಉಲ್ಲೇಖಿಸಿ, ಸಚಿವರ ಜಿಲ್ಲೆಯ ಶಿಕ್ಷಣ ವ್ಯವಸ್ಥೆ ಹಿಂದುಳಿದಿದೆ ಎಂದು ಟೀಕಿಸಿದ್ದಾರೆ.
ಸಚಿವರು ದಕ್ಷಿಣ ಕನ್ನಡ ಜಿಲ್ಲೆಯ ಬಗ್ಗೆ ಟೀಕೆ ಮಾಡುವುದನ್ನು ಬಿಟ್ಟು, ತಮ್ಮ ಜಿಲ್ಲೆಯ ಅಭಿವೃದ್ಧಿಯ ಕಡೆ ಗಮನಹರಿಸಬೇಕು ಎಂದು ಅವರು ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಆರೋಗ್ಯ, ಶಿಕ್ಷಣ ಹಾಗೂ ಮೂಲಸೌಕರ್ಯ ಕ್ಷೇತ್ರಗಳಲ್ಲಿ ಮುಂದಿದ್ದು, ಕಲ್ಬುರ್ಗಿ ಜಿಲ್ಲೆ ಇನ್ನೂ ಅನೇಕ ವಿಷಯಗಳಲ್ಲಿ ಹಿಂದೆ ಉಳಿದಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಇದೇ ವೇಳೆ, ಐಟಿ ಸಚಿವರಾಗಿ ತಮ್ಮ ಜಿಲ್ಲೆಗೆ ನೀಡಿದ ಕೊಡುಗೆಗಳ ಬಗ್ಗೆ ಪ್ರಶ್ನೆ ಎತ್ತಿದ ಅವರು, ಜಿಲ್ಲೆಯ ಅಭಿವೃದ್ಧಿಯ ಮೂಲಕ ನಿಮ್ಮ ಸಾಮರ್ಥ್ಯ ತೋರಿಸಿ ಎಂದು ಸಲಹೆ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು