6:12 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಶಿವಮೊಗ್ಗ: ಆಟವಾಡುತ್ತಿದ್ದಾಗ ಜೋಕಾಲಿ ಕುಣಿಕೆ ಬಿಗಿದು ಬಾಲಕಿ ಸಾವು

24/04/2026, 18:40

ಶಿವಮೊಗ್ಗ(reporterkarnataka.com): ಜೋಕಾಲಿ ಆಡಲು ಹೋಗಿ, ಕುಣಿಕೆ ಬಿಗಿದು ಬಾಲಕಿ ಸಾವಿಗೀಡಾದಂತಹ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಶಿವಮೊಗ್ಗ ತಾಲೂಕಿನ ಲಕ್ಕಿನಕೊಪ್ಪದಲ್ಲಿ ಮೂರು ದಿನದ ಹಿಂದೆ ಘಟನೆ ನಡೆದಿದ್ದು,ತಡವಾಗಿ ಬೆಳಕಿಗೆ ಬಂದಿದೆ.ಮೃತ ಬಾಲಕಿಯನ್ನು 9 ವರ್ಷದ ಪ್ರಣಮ್ಯ ಎಂದು ಗುರುತಿಸಲಾಗಿದೆ. ಲಕ್ಕಿನಕೊಪ್ಪದ ಚಿಕ್ಕಮ್ಮನ ಮನೆಯಲ್ಲಿ ಈ ಘಟನೆ ನಡೆದಿದೆ. ಬಾಲಕಿ ಪ್ರಣಮ್ಯ ರೂಮಿನಲ್ಲಿ ಕಟ್ಟಿದ್ದ ಜೋಕಾಲಿಯಲ್ಲಿ ಆಡುತ್ತಿದ್ದಳು, ಬಾಗಿಲು ಹಾಕಿ ಜೋಕಾಲಿ ಆಡುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಆಡುತ್ತಿದ್ದ ಜೋಕಾಲಿಯೇ ನೇಣಿನಂತೆ ಕತ್ತನ್ನು ಸುತ್ತಿಕೊಂಡು ಬಾಲಕಿ ಸಾವನ್ನಪ್ಪಿದ್ದಾಳೆ.
ಬಾಲಕಿ ಪ್ರಣಮ್ಯ ವಿದ್ಯಾನಗರದ ನಿವಾಸಿಯಾಗಿದ್ದು, ಲಕ್ಕಿನಕೊಪ್ಪದ ಚಿಕ್ಕಮ್ಮನ ಮನೆಗೆ ಬೇಸಿಗೆ ರಜೆ ಕಳೆಯಲು ಹೋಗಿದ್ದ ವೇಳೆ ಈ ದುರಂತ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಟ್ಟಿನಲ್ಲಿ ಈ ಬಾರಿಯ ಬೇಸಿಗೆ ರಜೆ ಪೋಷಕರಿಗೆ ಸಜೆಯಂತಾಗಿದ್ದು, ಮಕ್ಕಳನ್ನು ನೋಡಿಕೊಳ್ಳುವುದೇ ಒಂದು ದೊಡ್ಡ ಸವಾಲಾಗಿದೆ. ಬೇಸಿಗೆಯ ಸೆಖೆಯಿಂದಾಗಿ ನೀರಿನ ಮೂಲಗಳಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಮಕ್ಕಳ ಸಂಖ್ಯೆ ರಾಜ್ಯದಲ್ಲಿ ಎರಡಂಕಿ ದಾಟಿದೆ.

ಇತ್ತೀಚಿನ ಸುದ್ದಿ

ಜಾಹೀರಾತು