9:02 PM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

‘ಫ್ರೀಫೈರ್’ ಗೇಮ್ ಅಡಿಕ್ಷನ್ : ತಾಯಿ ಬುದ್ಧಿವಾದ ಹೇಳಿದ್ದಕ್ಕೆ 14 ವರ್ಷದ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ

24/04/2026, 20:45

ಹುಬ್ಬಳ್ಳಿ(reporterkarnataka.com): ಆನ್‌ಲೈನ್ ಗೇಮ್‌ಗೆ ದಾಸನಾಗಿದ್ದ 14 ವರ್ಷದ ಬಾಲಕನೊಬ್ಬ, ತಾಯಿ ಮೊಬೈಲ್ ಕಿತ್ತುಕೊಂಡಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಹುಬ್ಬಳ್ಳಿ ನಗರದ ಉದಯನಗರದಲ್ಲಿ ನಡೆದಿದೆ. ‘ಫ್ರೀಫೈರ್’ ಗೇಮ್‌ಗೆ ಅತಿಯಾಗಿ ಅಡಿಕ್ಟ್ ಆಗಿದ್ದ ಸಮರ್ಥ್ ಎಂಬ ಬಾಲಕನೇ ಈ ಅತಿರೇಕದ ನಿರ್ಧಾರಕ್ಕೆ ಶರಣಾದ ದುರ್ದೈವಿ. ಗೇಮ್ ಅಡಿಕ್ಷನ್: ಸಮರ್ಥ್ ಕಳೆದ ಕೆಲವು ದಿನಗಳಿಂದ ಸತತವಾಗಿ ಮೊಬೈಲ್‌ನಲ್ಲಿ ಆನ್‌ಲೈನ್ ಗೇಮ್‌ಗಳನ್ನು ಆಡುತ್ತಿದ್ದ. ಗುರುವಾರ ರಾತ್ರಿಯೂ ಗೇಮ್ ಆಡುವುದರಲ್ಲಿ ಮಗ್ನನಾಗಿದ್ದಾಗ ತಾಯಿ ಆತನಿಗೆ ಬುದ್ಧಿವಾದ ಹೇಳಿದ್ದಾರೆ.

*ತಕ್ಷಣದ ನಿರ್ಧಾರ :* “ಮೊಬೈಲ್ ಸಾಕು ಮಾಡಿ ಓದಿಕೊಳ್ಳುವತ್ತ ಗಮನ ಹರಿಸು” ಎಂದು ಹೇಳಿದ ತಾಯಿ ಆತನ ಕೈಲಿದ್ದ ಫೋನ್ ಕಿತ್ತುಕೊಂಡಿದ್ದಾರೆ. ಇದರಿಂದ ತೀವ್ರವಾಗಿ ನೊಂದ ಬಾಲಕ, ತಕ್ಷಣ ತನ್ನ ಕೋಣೆಗೆ ಹೋಗಿ ಸೀರೆಯಿಂದ ನೇಣು ಬಿಗಿದುಕೊಂಡಿದ್ದಾನೆ.

*ದೃಶ್ಯ ಕಂಡು ಪೋಷಕರು ಶಾಕ್:* ಸುಮಾರು 15-20 ನಿಮಿಷಗಳಾದರೂ ಮಗ ಹೊರಗೆ ಬಾರದಿದ್ದಾಗ ಆತಂಕಗೊಂಡ ತಂದೆ ಕಿಟಕಿಯಿಂದ ಇಣುಕಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಬಾಲಕ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ.

*ಪೊಲೀಸ್ ಕಮಿಷನರ್ ಸಲಹೆ:*
ಈ ಘಟನೆ ಕುರಿತು ಪ್ರತಿಕ್ರಿಯಿಸಿದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಪೋಷಕರಿಗೆ ಕೆಲವು ಪ್ರಮುಖ ಸಲಹೆಗಳನ್ನು ನೀಡಿದ್ದಾರೆ: ಮಕ್ಕಳು ಅಡಿಕ್ಷನ್‌ಗೆ ಒಳಗಾಗಿದ್ದರೆ ತಕ್ಷಣವೇ ಮೊಬೈಲ್ ಕಿತ್ತುಕೊಳ್ಳುವ ಬದಲು, ನಿಧಾನವಾಗಿ ಅದರಿಂದ ಹೊರಬರುವಂತೆ ಮಾಡಬೇಕು. ವ್ಯಸನ ಹೆಚ್ಚಾಗಿದ್ದರೆ ಶಿಕ್ಷಕರು ಅಥವಾ ಮಕ್ಕಳ ತಜ್ಞರ ಜೊತೆ ಸಮಾಲೋಚನೆ ನಡೆಸಿ. ಮೊಬೈಲ್ ಅನ್ನು ಜ್ಞಾನಾರ್ಜನೆ ಅಥವಾ ಹೊಸ ಕೌಶಲ್ಯ ಕಲಿಯಲು ಬಳಸುವಂತೆ ಪ್ರೇರೇಪಿಸಿ.

ಇತ್ತೀಚಿನ ಸುದ್ದಿ

ಜಾಹೀರಾತು