ಇತ್ತೀಚಿನ ಸುದ್ದಿ
ಚಿಕ್ಕಮಗಳೂರು: ಮಧ್ಯರಾತ್ರಿ ಕುಡುಕರ ಹುಚ್ಚಾಟ; ಸರ್ಕಾರಿ ಬಸ್ ಅಡ್ಡಗಟ್ಟಿ ಸೆಲ್ಫಿಗಾಗಿ ಕಾಟ
24/04/2026, 20:53
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಚಿಕ್ಕಮಗಳೂರು ನಗರದಲ್ಲಿ ಮಧ್ಯರಾತ್ರಿ ಕುಡಿದ ಮತ್ತಿನಲ್ಲಿ ಕಿಡಿಗೇಡಿಗಳು ಸರ್ಕಾರಿ ಬಸ್ನ್ನು ಅಡ್ಡಗಟ್ಟಿ ಹುಚ್ಚಾಟ ಮೆರೆದ ಘಟನೆ ನಡೆದಿದೆ.



ಕಡೂರಿನಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಸರ್ಕಾರಿ ಬಸ್ನ್ನು ರಸ್ತೆ ಮಧ್ಯೆ ಆಟೋ ನಿಲ್ಲಿಸಿ ಅಡ್ಡಗಟ್ಟಿದ ದುಷ್ಕರ್ಮಿಗಳು, ಬಸ್ ಮುಂದೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಈ ವೇಳೆ ಬಸ್ ಚಾಲಕ ಮನವಿ ಮಾಡಿದರೂ ಕೇಳದೇ ಕೂಗಾಡುತ್ತಾ ರೌಡಿಸಂ ಪ್ರದರ್ಶಿಸಿದ್ದಾರೆ.
ಘಟನೆ ಕಳೆದ ರಾತ್ರಿ ಸುಮಾರು 12 ಗಂಟೆಗೆ ನಗರದ ಟೆಂಟರ್ ಚಿಕನ್ ಬಳಿ ನಡೆದಿದ್ದು, ಈ ದೃಶ್ಯಗಳು ಬಸ್ನಲ್ಲಿದ್ದ ಪ್ರಯಾಣಿಕರ ಮೊಬೈಲ್ಗಳಲ್ಲಿ ಸೆರೆಯಾಗಿವೆ.
ಮಧ್ಯರಾತ್ರಿ ಸಾರ್ವಜನಿಕ ರಸ್ತೆಯಲ್ಲಿ ಈ ರೀತಿ ಹುಚ್ಚಾಟ ಮೆರೆದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಈ ಘಟನೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.












