ಇತ್ತೀಚಿನ ಸುದ್ದಿ
ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು
25/04/2026, 15:40
ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com
ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲಾದ ಘಟನೆ ಮೂಡಿಗೆರೆ ತಾಲೂಕಿನ ಕಡಿದಾಳು ಗ್ರಾಮದಲ್ಲಿ ನಡೆದಿದೆ.
ಸುಬ್ಬಮ್ಮ (65) ಮೃತ ದುರ್ದೈವಿ. ಬೆಳಗ್ಗೆ ಸೊಪ್ಪು ತರುವುದಾಗಿ ಹೇಳಿ ಹೋಗಿದ್ದ ಸುಬ್ಬಮ್ಮ
ಅವರು ಸಂಜೆಯಾದರೂ ಮನೆಗೆ ಬಾರದ ಕಾರಣ ಕುಟುಂಬಸ್ಥರಿಂದ ಹುಡುಕಾಟ ನಡೆಸಿದ್ದರು. ಸಂಜೆ ಹೇಮಾವತಿ ನದಿಯಲ್ಲಿ ಸುಬ್ಬಮ್ಮ ಮೃತದೇಹ ಪತ್ತೆಯಾಗಿದೆ. ಮೃತದೇಹ ಸಮಾಜ ಸೇವಕ ಆರೀಫ್ ತಂಡ ಮೇಲೆತ್ತಿದೆ. ಸ್ಥಳಕ್ಕೆ ಮೂಡಿಗೆರೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತದೇಹ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.












