5:51 PM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಸಚಿವ ಡಿ. ಸುಧಾಕರ್ ಆರೋಗ್ಯ ಗಂಭೀರ: ಕಿಮ್ಸ್ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

25/04/2026, 20:22

ಬೆಂಗಳೂರು(reporterkarnataka.com): ಯೋಜನೆ ಮತ್ತು ಸಾಂಖಿತ ಇಲಾಖೆ ಸಚಿವ ಡಿ ಸುಧಾಕರ್ ಕಳೆದ ಕೆಲವು ದಿನಗಳಿಂದ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಸುತ್ತಿದ್ದಾರೆ, ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ಮಾಡಿ ಅರೋಗ್ಯ ವಿಚಾರಿಸಿದರು.
ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಡಿ. ಸುಧಾಕರ್ ಅವರನ್ನು ಇತ್ತೀಚೆಗೆ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.


ಸುಧಾಕರ್ ಆರೋಗ್ಯ ಕ್ಷೀಣಿಸುತ್ತಿದ್ದ ಕಾರಣ ಆತಂಕ ಮನೆ ಮಾಡಿತ್ತು. ಇದೀಗ ಸುಧಾಕರ್ ಆರೋಗ್ಯ ವಿಚಾರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಮ್ಸ್ ಆಸ್ಪತ್ರಗೆ ಭೇಟಿ ನೀಡಿದ್ದಾರೆ.
ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಸುಧಾಕರ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ವಾಸಕೋಶ ಸೋಂಕಿನಿಂದ ಬಳಲುತ್ತಿರುವ ಸುಧಾಕರ್ ಆರೋಗ್ಯ ಗಂಭೀರವಾಗಿದೆ. ಆಸ್ಪತ್ರೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ವೈದ್ಯರ ಜೊತೆ ಚರ್ಚಿಸಿದ್ದಾರೆ. ಸುಧಾಕರ್ ಆರೋಗ್ಯ ಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.
ಸುಧಾಕರ್ ಆರೋಗ್ಯ ಕುರಿತು ವೈದ್ಯರಿಂದ ಮಾಹಿತಿ ಪಡೆದ ಸಿದ್ದರಾಮಯ್ಯ ಬಳಿಕ ಕುಟುಂಬಸ್ಥರ ಭೇಟಿಯಾಗಿ ಮಾತನಾಡಿದ್ದಾರೆ. ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ. ಆರೋಗ್ಯ ಸ್ಥಿರವಾಗಿದ್ದು, ಶೀಘ್ರದಲ್ಲೇ ಚೇತರಿಸಿಕೊಳ್ಳುವ ಭರವಸೆ ವ್ಯಕ್ತಪಡಿಸಿದ್ದಾರೆ.
ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಚಿವ ಜಮೀರ್ ಅಹಮ್ಮದ್ ಖಾನ್, ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಸೇರಿದಂತೆ ಪ್ರಮುಖರು ಸಾಥ್ ನೀಡಿದರು. ಭೇಟಿ ವೇಳೆ ಆಸ್ಪತ್ರೆ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಡೆಸಲಾಗಿತ್ತು.
ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಡಿ ಸುಧಾಕರ್‌ಗೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿತ್ತು. ಸಮಸ್ಯೆ ಉಲ್ಬಣಗೊಂಡ ಕಾರಣ ಆರೋಗ್ಯ ಹದಗೆಟ್ಟಿತ್ತು. ನಾಲ್ಕು ದಿನಗಳ ಹಿಂದೆ ಮಣಿಪಾಲ್ ಆಸ್ಪತ್ರೆಯಿಂದ ಕಿಮ್ಸ್ ಆಸ್ಪತ್ಪೆಗೆ ಶಿಫ್ಟ್ ಮಾಡಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು