11:20 PM Monday27 - April 2026
ಬ್ರೇಕಿಂಗ್ ನ್ಯೂಸ್
ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು

ಇತ್ತೀಚಿನ ಸುದ್ದಿ

ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ ಸಚಿವ ಕುಮಾರಸ್ವಾಮಿ

27/04/2026, 22:28

ಕೋಲಾರ(reporterkarnataka.com): ಸಚಿವ ಡಿ.ಸುಧಾಕರ್‌ ಅವರ ಆರೋಗ್ಯದ ವಾಸ್ತವಾಂಶವನ್ನು ರಾಜ್ಯ ಸರ್ಕಾರವು ಜನರ ಮುಂದೆ ಇಡಬೇಕು. ಅವರನ್ನು ನಂಬಿರುವ ಅಭಿಮಾನಿಗಳು, ಕ್ಷೇತ್ರದ ಜನರ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಒತ್ತಾಯಿಸಿದಾರೆ. ಕೋಲಾರದ ಮಾಲೂರು ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೆಲ ದುರ್ಬುದ್ಧಿ ಜನರು ಇರುತ್ತಾರೆ. ಅಂಥ ಜನರಿಂದ ಹೆಬ್ಬಟ್ಟಿನ ಘಟನೆ ನಡೆಯುತ್ತವೆ. ದುರ್ಬಳಕೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ತುಸು ಎಚ್ಚರದಿಂದ ಇರಬೇಕು ಎಂದಷ್ಟೇ ಹೇಳಿದ್ದೆ. ಸುಧಾಕರ್‌ ವಿಚಾರದಲ್ಲಿ ಹೇಳಿದ್ದಲ್ಲ, ನನ್ನ ಮಾತಿನಲ್ಲಿ ಮಾರ್ಮಿಕ ಅರ್ಥವೂ ಇಲ್ಲ’ ಎಂದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಗಾದಿ ಪೈಪೋಟಿ ಕುರಿತು ಪ್ರತಿಕ್ರಿಯಿಸಿ, ‘ದೆಹಲಿಗೆ ತೆರಳಲು 40ರಿಂದ 50 ಶಾಸಕರ ವಿಮಾನದ ಟಿಕೆಟ್‌ ಬುಕ್ಕಿಂಗ್‌ ನಡೆಯುತ್ತಿದೆ. ಮುಖ್ಯಮಂತ್ರಿ ಆಗಬೇಕೆಂದು ಪದೇಪದೇ ದೆಹಲಿಗೆ ಭೇಟಿ ನೀಡುತ್ತಿದ್ದಾರೆ. ವರ್ಷದಿಂದ ಈ ಪೈಪೋಟಿ ನಡೆಯುತ್ತಿದೆ. ಈಗಾಗಲೇ ಸಂಕ್ರಾಂತಿ, ಯುಗಾದಿ ಕ್ರಾಂತಿ ಮಾತು ಮುಗಿದಿದೆ. ಚುನಾವಣೆ ಫಲಿತಾಂಶದ ಬಳಿಕ ಕ್ರಾಂತಿ ಆಗುವ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಯಾವ ರೀತಿ ಕ್ರಾಂತಿ ನಡೆಯಬಹುದೆಂದು ನಾನು ಕುತೂಹಲದಿಂದ ಕಾಯುತ್ತಿದ್ದೇನೆ’ ಎಂದು ಹೇಳಿದರು.

ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಏನೆಲ್ಲಾ ವ್ಯವಹಾರ ನಡೆಯುತ್ತಿದೆ ಎಂಬುದು ನನಗೆ ಗೊತ್ತಿಲ್ಲ ಎಂದರು.

ಒಳಮೀಸಲಾತಿ ವಿಚಾರವನ್ನು ನಾನು ರಾಜಕೀಯವಾಗಿ ಬಳಕೆ ಮಾಡಿಕೊಳ್ಳಲು ಇಷ್ಟಪಡುವುದಿಲ್ಲ. ಈಗಾಗಲೇ ರಾಜ್ಯ ಸರ್ಕಾರವು ವಿಂಗಡಣೆ ಮಾಡಿದ್ದು, ಸಮುದಾಯಕ್ಕೆ ತೃಪ್ತಿಯಾದರೆ ಮುಗಿಯಿತು. ರಾಜಕೀಯವಾಗಿ ನಾನೇಕೆ ಎತ್ತಿಕಟ್ಟಿ ಸಂಘರ್ಷಕ್ಕೆಡೆ ಮಾಡಿಕೊಡಲಿ ಎಂದು ಪ್ರಶ್ನಿಸಿದರು.

ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್‌ನ ಮಿತ್ರ ಪಕ್ಷವಾದ ಡಿಎಂಕೆ ತಕರಾರು ಅರ್ಜಿ ಸಲ್ಲಿಸಿದೆ. ಸುಪ್ರೀಂ ಕೋರ್ಟ್‌ ತಮ್ಮ ಪರವಾಗಿ ತೀರ್ಪು ನೀಡಿದ್ದು, ಕೇಂದ್ರ ಸರ್ಕಾರ ಅನುಮತಿ ಕೊಡಿಸಬೇಕೆಂದು ರಾಜ್ಯ ಕಾಂಗ್ರೆಸ್‌ ಸರ್ಕಾರ ಹೇಳುತ್ತಿದೆ. ಶೀಘ್ರದಲ್ಲೇ ಡಿಪಿಆರ್ ಸಲ್ಲಿಸುವುದಾಗಿಯೂ ಸಚಿವರು ಹೇಳಿದ್ದಾರೆ. ಈಚೆಗೆ ತಮಿಳುನಾಡಿನಲ್ಲಿ ಪ್ರಚಾರ ಕೂಡ ನಡೆಸಿ ಬಂದಿದ್ದಾರೆ. ಡಿಎಂಕೆ ಜೊತೆ ಕುಳಿತು ಈ ಸಮಸ್ಯೆ ಬಗೆಹರಿಸಿಕೊಳ್ಳಬಹುದಲ್ಲವೇ? ನ್ಯಾಯಾಲಯಕ್ಕೆ ಹೋಗಬೇಡಿ ಎಂದು ಕೇಳಿಕೊಳ್ಳಬಹುದಲ್ಲವೇ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು