9:45 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ ಸಚಿವ ಕುಮಾರಸ್ವಾಮಿ

27/04/2026, 22:28

ಕೋಲಾರ(reporterkarnataka.com): ಸಚಿವ ಡಿ.ಸುಧಾಕರ್‌ ಅವರ ಆರೋಗ್ಯದ ವಾಸ್ತವಾಂಶವನ್ನು ರಾಜ್ಯ ಸರ್ಕಾರವು ಜನರ ಮುಂದೆ ಇಡಬೇಕು. ಅವರನ್ನು ನಂಬಿರುವ ಅಭಿಮಾನಿಗಳು, ಕ್ಷೇತ್ರದ ಜನರ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಒತ್ತಾಯಿಸಿದಾರೆ. ಕೋಲಾರದ ಮಾಲೂರು ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೆಲ ದುರ್ಬುದ್ಧಿ ಜನರು ಇರುತ್ತಾರೆ. ಅಂಥ ಜನರಿಂದ ಹೆಬ್ಬಟ್ಟಿನ ಘಟನೆ ನಡೆಯುತ್ತವೆ. ದುರ್ಬಳಕೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ತುಸು ಎಚ್ಚರದಿಂದ ಇರಬೇಕು ಎಂದಷ್ಟೇ ಹೇಳಿದ್ದೆ. ಸುಧಾಕರ್‌ ವಿಚಾರದಲ್ಲಿ ಹೇಳಿದ್ದಲ್ಲ, ನನ್ನ ಮಾತಿನಲ್ಲಿ ಮಾರ್ಮಿಕ ಅರ್ಥವೂ ಇಲ್ಲ’ ಎಂದರು.
ರಾಜ್ಯದಲ್ಲಿ ಮುಖ್ಯಮಂತ್ರಿ ಗಾದಿ ಪೈಪೋಟಿ ಕುರಿತು ಪ್ರತಿಕ್ರಿಯಿಸಿ, ‘ದೆಹಲಿಗೆ ತೆರಳಲು 40ರಿಂದ 50 ಶಾಸಕರ ವಿಮಾನದ ಟಿಕೆಟ್‌ ಬುಕ್ಕಿಂಗ್‌ ನಡೆಯುತ್ತಿದೆ. ಮುಖ್ಯಮಂತ್ರಿ ಆಗಬೇಕೆಂದು ಪದೇಪದೇ ದೆಹಲಿಗೆ ಭೇಟಿ ನೀಡುತ್ತಿದ್ದಾರೆ. ವರ್ಷದಿಂದ ಈ ಪೈಪೋಟಿ ನಡೆಯುತ್ತಿದೆ. ಈಗಾಗಲೇ ಸಂಕ್ರಾಂತಿ, ಯುಗಾದಿ ಕ್ರಾಂತಿ ಮಾತು ಮುಗಿದಿದೆ. ಚುನಾವಣೆ ಫಲಿತಾಂಶದ ಬಳಿಕ ಕ್ರಾಂತಿ ಆಗುವ ಬಗ್ಗೆ ಮಾತುಗಳು ಕೇಳಿಬರುತ್ತಿವೆ. ಯಾವ ರೀತಿ ಕ್ರಾಂತಿ ನಡೆಯಬಹುದೆಂದು ನಾನು ಕುತೂಹಲದಿಂದ ಕಾಯುತ್ತಿದ್ದೇನೆ’ ಎಂದು ಹೇಳಿದರು.

ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ಏನೆಲ್ಲಾ ವ್ಯವಹಾರ ನಡೆಯುತ್ತಿದೆ ಎಂಬುದು ನನಗೆ ಗೊತ್ತಿಲ್ಲ ಎಂದರು.

ಒಳಮೀಸಲಾತಿ ವಿಚಾರವನ್ನು ನಾನು ರಾಜಕೀಯವಾಗಿ ಬಳಕೆ ಮಾಡಿಕೊಳ್ಳಲು ಇಷ್ಟಪಡುವುದಿಲ್ಲ. ಈಗಾಗಲೇ ರಾಜ್ಯ ಸರ್ಕಾರವು ವಿಂಗಡಣೆ ಮಾಡಿದ್ದು, ಸಮುದಾಯಕ್ಕೆ ತೃಪ್ತಿಯಾದರೆ ಮುಗಿಯಿತು. ರಾಜಕೀಯವಾಗಿ ನಾನೇಕೆ ಎತ್ತಿಕಟ್ಟಿ ಸಂಘರ್ಷಕ್ಕೆಡೆ ಮಾಡಿಕೊಡಲಿ ಎಂದು ಪ್ರಶ್ನಿಸಿದರು.

ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್‌ನ ಮಿತ್ರ ಪಕ್ಷವಾದ ಡಿಎಂಕೆ ತಕರಾರು ಅರ್ಜಿ ಸಲ್ಲಿಸಿದೆ. ಸುಪ್ರೀಂ ಕೋರ್ಟ್‌ ತಮ್ಮ ಪರವಾಗಿ ತೀರ್ಪು ನೀಡಿದ್ದು, ಕೇಂದ್ರ ಸರ್ಕಾರ ಅನುಮತಿ ಕೊಡಿಸಬೇಕೆಂದು ರಾಜ್ಯ ಕಾಂಗ್ರೆಸ್‌ ಸರ್ಕಾರ ಹೇಳುತ್ತಿದೆ. ಶೀಘ್ರದಲ್ಲೇ ಡಿಪಿಆರ್ ಸಲ್ಲಿಸುವುದಾಗಿಯೂ ಸಚಿವರು ಹೇಳಿದ್ದಾರೆ. ಈಚೆಗೆ ತಮಿಳುನಾಡಿನಲ್ಲಿ ಪ್ರಚಾರ ಕೂಡ ನಡೆಸಿ ಬಂದಿದ್ದಾರೆ. ಡಿಎಂಕೆ ಜೊತೆ ಕುಳಿತು ಈ ಸಮಸ್ಯೆ ಬಗೆಹರಿಸಿಕೊಳ್ಳಬಹುದಲ್ಲವೇ? ನ್ಯಾಯಾಲಯಕ್ಕೆ ಹೋಗಬೇಡಿ ಎಂದು ಕೇಳಿಕೊಳ್ಳಬಹುದಲ್ಲವೇ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು