12:45 PM Wednesday19 - August 2026
ಬ್ರೇಕಿಂಗ್ ನ್ಯೂಸ್
ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ…

ಇತ್ತೀಚಿನ ಸುದ್ದಿ

ಬಂಟ್ವಾಳ ಬಸ್ ನಲ್ಲಿ ಕಳ್ಳರ ಕೈಚಳಕ: ಪ್ರಯಾಣಿಕ ಮಹಿಳೆ ಪರ್ಸ್ ನಿಂದ 6.24 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

28/04/2026, 21:16

ಬಂಟ್ವಾಳ(reporterkarnataka.com): ಬಂಟ್ವಾಳದ ಕೆ.ಎಸ್.ಆರ್.ಟಿ.ಸಿ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಹಿಳೆಯೋರ್ವರ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಇರಿಸಿದ್ದ ಪರ್ಸ್ ಕಳವಾದ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಾಗೆಕಾನ ನಿವಾಸಿ ಕ್ರಿಸ್ತಿನ್ ವೇಗಸ್ ಅವರ ಪರ್ಸ್ ಕಳವಾಗಿದೆ. ಪರ್ಸ್ ನಲ್ಲಿ ಐದೂವರೆ ಪವನ್ ತೂಕದ ಚಿನ್ನದ ಕರಿಮಣಿ ಸರ ಮತ್ತು ನಾಲ್ಕು ಗ್ರಾಂ ತೂಕದ ಚಿನ್ನದ ಉಂಗುರ ಸೇರಿ ಒಟ್ಟು 48 ಗ್ರಾಂ ತೂಕದ ಚಿನ್ನಾಭರಣ ಇತ್ತು. ಇದರ ಅಂದಾಜು ಮೌಲ್ಯ 6,24,000 ರೂ. ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಗಂಡನ ಜತೆ ಉಜಿರೆಯಲ್ಲಿ ಸಂಬಂಧಿಕರ ಮೆಹಂದಿ ಕಾರ್ಯಕ್ರಮಕ್ಕೆ ಹೋಗಿ ವಾಪಸು ಮಂಗಳೂರು ಕಡೆಗೆ ಬರುವ ಬಸ್ ನಲ್ಲಿ ಘಟನೆ ಸಂಭವಿಸಿದೆ. ಬಿ.ಸಿ. ರೋಡಿನಲ್ಲಿ ಬಸ್ ಇಳಿದು ನೋಡುವಾಗ ಕಳವಾದ ವಿಚಾರ ಬೆಳಕಿಗೆ ಬಂದಿದೆ ಎಂದು ಪೊಲೀಸರಿಗೆ ಅವರು ದೂರು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು