6:51 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಬೆಂಗಳೂರು: ಪಶ್ಚಿಮ ಬಂಗಾಳದವರು ವಾಸವಾಗಿದ್ದ 12 ಶೆಡ್‌ಗಳಿಗೆ ಬೆಂಕಿ ಹಚ್ಚಿದ ದುಪ್ಕರ್ಮಿಗಳು

29/04/2026, 18:14

ಬೆಂಗಳೂರು(reporterkarnataka.com): ಪಶ್ಚಿಮ ಬಂಗಾಳದವರು ವಾಸವಾಗಿದ್ದ 12 ಶೆಡ್‌ಗಳಿಗೆ ಬೆಂಕಿ ತಗುಲಿದ ಪರಿಣಾಮ ಸುಟ್ಟು ಕರಕಲಾಗಿರುವ ಘಟನೆ ಬಂಡೆಪಾಳ್ಯ ಠಾಣೆ ವ್ಯಾಪ್ತಿಯ ಸೋಮಸಂದ್ರಪಾಳ್ಯದಲ್ಲಿ ನಡೆದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಎಚ್‌ಎಸ್‌ಆರ್ 2ನೇ ವಲಯದ 1ನೇ ಮುಖ್ಯರಸ್ತೆಯಲ್ಲಿ ಪ್ರಕಾಶ್ ಎಂಬುವರಿಗೆ ಸೇರಿದ 1.2 ಎಕರೆ ಜಾಗದಲ್ಲಿ ಭಾನುವಾರ ಮುಂಜಾನೆ 3 ಗಂಟೆ ಸುಮಾರಿಗೆ ದುರ್ಘಟನೆ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಸುಮಾರು 100ಕ್ಕೂ ಹೆಚ್ಚು ಮಂದಿ ಚಿಂದಿ ಆಯುವ ಕೆಲಸ ಮಾಡಿಕೊಂಡು ಸೋಮಸಂದ್ರ ಪಾಳ್ಯದಲ್ಲಿರುವ ಪ್ರಕಾಶ್‌ ಎಂಬುವರಿಗೆ ಸೇರಿದ ಜಾಗದಲ್ಲಿರುವ ಶೆಡ್‌ಗಳಲ್ಲಿ ವಾಸವಾಗಿದ್ದಾರೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆ ಎಲ್ಲರೂ ಪಶ್ಚಿಮ ಬಂಗಾಳಕ್ಕೆ ತೆರಳಿದ್ದಾರೆ. ಈ ಮಧ್ಯೆ ಮುಂಜಾನೆ 3 ಗಂಟೆ ಸುಮಾರಿಗೆ ಶೆಡ್‌ನಲ್ಲಿ ಆಕಸ್ಮಿಕ ಬೆಂಕಿ ತಗುಲಿ, ಶೆಡ್‌ನಲ್ಲಿದ್ದ 6 ಕ್ಕೂ ಹೆಚ್ಚು 5 ಕೆ.ಜಿ. ತೂಕದ ಸಿಲಿಂಡರ್‌ಗಳು, ಫ್ರಿಜ್‌ಗಳು ಸ್ಫೋಟಗೊಂಡಿವೆ. ಬೈಕ್‌ಗಳು, ಅಡುಗೆ ಮನೆಯ ವಸ್ತುಗಳು ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್‌ ಶೆಡ್‌ನಲ್ಲಿ ಯಾರು ಇಲ್ಲದ ಪರಿಣಾಮ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಾಂಜಾ ಸೇವಿಸಿದ್ದವರಿಂದ ಕೃತ್ಯ ನಡೆದಿದೆ ಎಂಬ ಆರೋಪವಿದೆ. ಆದರೆ, ಖಾಲಿ ಜಾಗವಾದರಿಂದ ಕೆಲ ಯುವಕರು ಬಂದು ಗುಂಪು ಸೇರುತ್ತಿದ್ದರು. ಗಾಂಜಾ ಸೇವನೆಯಿಂದ ಕೃತ್ಯ ನಡೆದಿರುವ ಬಗ್ಗೆ ಮಾಹಿತಿ ಇಲ್ಲ. ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

*ಗಾಂಜಾ ಸೇವಿಸಿದವರಿಂದ ಕೃತ್ಯ?:
ಸೆಕೆಗೆ ನಿದ್ದೆ ಬರುತ್ತಿರಲಿಲ್ಲ. ಬಾಗಿಲು ತೆರೆದು ಹೊರಗೆ ಬಂದಾಗ ಬೆಂಕಿ ಉರಿಯುತ್ತಿತ್ತು. ಜನರೆಲ್ಲರೂ ಸೇರಿದ್ದರು. ಅದಕ್ಕೂ ಮೊದಲು ಗಾಂಜಾ ಸೇವಿಸಿದ್ದ ಹುಡುಗರು ಗಲಾಟೆ ಮಾಡುತ್ತಿದ್ದರು. ಗಲಾಟೆ ಬಳಿಕ ದುರಂತ ಸಂಭವಿಸಿದೆ ಎಂದು ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿ ನಾರಾಯಣ್‌ ಮತ್ತು ಬಂಡೇಪಾಳ್ಯ ಠಾಣಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಗಾಂಜಾ ಸಿಗದಿದ್ದಕ್ಕೆ ಬೆಂಕಿ ಹಚ್ಚಲಾಗಿದೆ: ಸತೀಶ್‌ ರೆಡ್ಡಿ
ಸೋಮಸಂದ್ರ ಪಾಳ್ಯ ಸುತ್ತ-ಮುತ್ತ ಅಕ್ರಮ ವಾಸಿಗಳು ಹೆಚ್ಚಾಗಿದ್ದು, ಬಾಂಗ್ಲಾದೇಶದಿಂದ ಬಂದು ಪಶ್ಚಿಮ ಬಂಗಾಳ ಎಂದು ದಾಖಲೆ ತೋರಿಸುತ್ತಿದ್ದಾರೆ. ಮೊದಲು ಕಸ ಆಯುತ್ತಿದ್ದರು. ಇದೀಗ ಗಾಂಜಾ ಮಾರಾಟ ವೃತ್ತಿಯನ್ನಾಗಿಸಿಕೊಂಡಿದ್ದಾರೆ. ಕಳೆದ ಎರಡು ದಿನದಿಂದ ಎಲ್ಲರು ಊರಿಗೆ ಹೋಗಿದ್ದಾರೆ. ಸ್ಥಳೀಯ ಗಾಂಜಾ ಗಿರಾಕಿಗಳು ಬಂದು ಗಲಾಟೆ ಮಾಡಿದ್ದಾರೆ. ಗಾಂಜಾ ಸಿಕ್ತಿಲ್ಲ ಎಂಬ ಸಿಟ್ಟಿಗೆ ಗಲಾಟೆ ಮಾಡಿದ್ದಾರೆ. ಈ ವೇಳೆ ಬೆಂಕಿ ಹಚ್ಚಿರುವ ಬಗ್ಗೆ ಮಾಹಿತಿ ಬಂದಿದೆ. ಈ ಹಿಂದೆಯೂ ಗಾಂಜಾ ಸಂಬಂಧ ಪೊಲೀಸರಿಗೆ ದೂರು ಕೊಡಲಾಗಿತ್ತು. ಕೆಲವರನ್ನು ಬಂಧಿಸಿದ್ದರು. ಆದರೆ, ಸರಿಯಾದ ಕ್ರಮ ಆಗಿಲ್ಲ ಎಂದು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್‌ ರೆಡ್ಡಿ ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು