6:18 PM Wednesday29 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಮೇ 15ರಂದು ರಾಜ್ಯಾದ್ಯಂತ ಕನ್ನಡ ಚಲನಚಿತ್ರ “ಶಿಖಂಡಿ” ಬಿಡುಗಡೆ

29/04/2026, 18:17

ಗಣೇಶ್ ಇನಾಂದಾರ್ ಬಳ್ಳಾರಿ

info.reporterkaerk@gmail
com

ಕನ್ನಡ ಚಲನಚಿತ್ರ ಶಿಖಂಡಿ ಮೇ 15ರಂದು ರಾಜ್ಯಾದ್ಯಂತ ನೂರು ಚಿತ್ರಮಂದಿರಗಳಲ್ಲಿ ಪ್ರದರ್ಶನ ಗೊಳ್ಳಲಿದೆ ಎಂದು ಚಿತ್ರದ ನಿರ್ಮಾಪಕರಾದ ಪೊಲಾ ಪ್ರವೀಣ್ ತಿಳಿಸಿದರು.
ಬುಧವಾರ ಬಳ್ಳಾರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು, ಈ ಚಿತ್ರದಲ್ಲಿ ಕಥಾವಸ್ತುವಿನ ಉತ್ತಮ ಸಂದೇಶವಿದೆ,ಒಳ್ಳೆಯ ಹಾಡುಗಳು ಎಲ್ಲರೂ ನೋಡಿ ಆನಂದಿಸಿ ತಾಯಿ ಪ್ರೀತಿಸುವ ವಸ್ತು, ಹಾಡು ಪ್ರೇಕ್ಷಕರ ಮನ ಕರಗಸುವಂತೆ ಮೂಡಿದೆ ಸದ್ಯದಲ್ಲಿ ಟ್ರೇಲರ್
ಬಿಡುಗಡೆ ಮಾಡಲಿದೆ ಎಂದು ತಿಳಿದರು.
ಇಂದಿನ ಸಮಾಜದಲ್ಲಿ ಮಂಗಳಮುಖಿಯರ ಬಗ್ಗೆ ಇರುವ ತಪ್ಪು ಕಲ್ಪನೆಯನ್ನು ಅಳಿಸು ಹಾಕುವ ಹಾಗೂ ಸಮಾಜದ ಆಚರಣೆಗೆ ದೈವತ್ವದ ಕಲ್ಪನೆಯ ತುಂಬುವ ಪ್ರಯತ್ನ ಈ ಚಿತ್ರದಲ್ಲಿ ಪ್ರಯತ್ನಮಾಡಲಾಗಿದೆ ಎಂದು ವಿವರಿಸಿದರು. ಚಿತ್ರ ಲಾಭಗಳಿಸಿದರೆ ಮಂಗಳಮುಖಿ ಸಮಾಜದ ಜನರಿಗೆ ಹೊಲಿಗೆ ಯಂತ್ರ ಕೊಡಿಸಿ ಅವರು ಭಿಕ್ಷಾಟನೆಗೆ ಹೋಗುವುದನ್ನು ತಪ್ಪಿಸಲು ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಚಿತ್ರ ನಿರ್ದೇಶಕ ಗುರುಮೂರ್ತಿ ಮಾತನಾಡಿ,ಮಹಾಭಾರತದ ಶಿಖಂಡಿ ಪಾತ್ರವನ್ನು ಚಿತ್ರದ ಮೂಲ ವಸ್ತುವಾಗಿಟ್ಟುಕೊಂಡು ರಚಿಸಿದೆ.
ಮೊದಲಿಗೆ ರಾಜ್ಯದ ನೂರು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲಿದೆ, ನಂತರ ತೆಲುಗು ಭಾಷೆಯಲ್ಲಿ ಬಿಡುಗಡೆ ಮಾಡಲಿ ಬಳ್ಳಾರಿಯ 22 ಸ್ಥಳೀಯ ಕಲಾವಿದರಿಗೆ ಅವಕಾಶ ಮಾಡಿಕೊಡಲಾಗಿದೆ.
ಬಳ್ಳಾರಿ, ಮೈಸೂರು, ಬಿಡದಿ,ಮಾಗಡಿ,ಬೆಂಗಳೂರು, ಮೊದಲಾದ ಕಡೆ ಚಿತ್ರೀ ಕರಿಸಲಾಗಿದೆ ಚಿತ್ರದಲ್ಲಿ ನಾಲ್ಕು ಹಾಡುಗಳಿವೆ ಚಿತದ್ರ ಒಟ್ಟು ಸಮಯವು 2.20 ಗಂಟೆಗಳ ಕಾಲ ವಾಗಿರುತ್ತದೆ ಚಿತ್ರದ ಹಾಡುಗಳನ್ನು ಚಿನ್ನಸ್ವಾಮಿ ಹಾಡು ಬರೆದಿದ್ದಾರೆ ಎಂದು ವಿವರಿಸಿದರು.
ಚಿತ್ರದ ನಾಯಕಿ ಖ್ಯಾತಿ ಹಾಗೂ ನಾಯಕ ನಟ ಯುವರಾಜ್ ಗೌಡ ಮಾತನಾಡಿದರು, ನಿಖಿಲ್ ಮಾಳೇಕರ್,ಸ್ವಾಮಿ,ಚಾಂದಿನಿ,ಆನಂದ್ ಹೂಗಾರ್,ಸಹ ನಿರ್ದೇಶಕ ಉಮೇಶ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು