8:49 AM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ಮುಗಿದ 6 ತಿಂಗಳ ಗಡು: ಕೊಟ್ಟ ಮಾತಿನಂತೆ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡಲು ಸರಕಾರಕ್ಕೆ ಹಕ್ಕೊತ್ತಾಯ

15/09/2021, 17:23

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಭರವಸೆಯ ನೀಡಿರುವ ಸರ್ಕಾರಕ್ಕೆ ಹಕ್ಕೊತ್ತಾಯದ ಮನವಿ ಸಲ್ಲಿಸಲಾಯಿತು.


ಅಥಣಿ ತಹಸಿಲ್ದಾರ್ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದ ಅಥಣಿ ತಾಲೂಕು ವೀರಶೈವ ಪಂಚಮಸಾಲಿ ಸಮಾಜ ಸೇವಾ ಸಂಘದ ಮುಖಂಡರು ಕಳೆದ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವುದಾಗಿ ಭರವಸೆ ನೀಡಿತ್ತು. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸದನದಲ್ಲಿ ನಿರಂತರ ಹಕ್ಕೋತಾಯದ ಮಾಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಆರು ತಿಂಗಳೊಳಗಾಗಿ ಮೀಸಲಾತಿ ನೀಡುವುದಾಗಿ ತಿಳಿಸಿತ್ತು. ಈಗ ಸೆಪ್ಟೆಂಬರ್ 15ಕ್ಕೆ ಆರು ತಿಂಗಳ ಅವಧಿ ಮುಗಿಯುವುದರೊಳಗೆ ಮೀಸಲಾತಿ ಘೋಷಿಸಬೇಕೆಂದು ಮುಖ್ಯಮಂತ್ರಿಗಳಿಗೆ ಆಗ್ರಹಿಸಿದ್ದಾರೆ.


ಇದೇ ಸಂದರ್ಭದಲ್ಲಿ ಸಂಸ್ಥಾಪಕ ಅಧ್ಯಕ್ಷ ರಮೇಶ ಗೌಡ ಪಾಟೀಲ, ತಾಲೂಕು ಅದ್ಯಕ್ಷ ಅವಿನಾಶ ನಾಯಿಕ , ಯುವ ಘಟಕದ ಅಧ್ಯಕ್ಷ ಪರಶುರಾಮ ನಂದೇಶ್ವರ , ಮಹಿಳಾ ಘಟಕದ ಅದ್ಯಕ್ಷ ರೋಹಿಣಿ ಸಂಜೀವ ವಾಂಗಿ , ಮುಖಂಡರಾದ ಮುತ್ತಣ್ಣಾ ಸಂತ್ತಿ ,ಚಿದಾನಂದ ಪಾಟೀಲ ,ಶೀವು ಸಂಕ , ಶೀವಗೌಡಾ ನೇಮಗೌಡ,ಶೀವು  ಸಿಂದೂರ,ಮುಂತಾದವರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು